ಭಾರೀ ಗಾಳಿ ಮಳೆ : ಬಳ್ಪದ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಜಖಂ : ಕಾರು ಚಾಲಕನಿಗೆ ಗಂಭೀರ ಗಾಯ

November 6, 2019
10:12 PM

ಬಳ್ಪ: ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಪಂಜ ರಸ್ತೆಯ  ಬಳ್ಪ ಬಳಿಯ ಎಣ್ಣೆಮಜಲು ಕ್ರಾಸ್ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬವರು  ಗಂಭೀರವಾಗಿ ಗಾಯಗೊಂಡಿದ್ದಾರೆ.

ಬುಧವಾರ ಸಂಜೆ ಭಾರೀ ಗುಡುಗು ಸಹಿತ ಮಳೆಯಾಗಿದೆ. ಸುಮಾರು 6 ಗಂಟೆಯಿಂದ ಆರಂಭವಾದ ಭಾರಿ ಸಿಡಿಲು,ಗುಡುಗು,ಗಾಳಿ ಸಹಿತವಾದ ಮಳೆ ಬಳ್ಪ, ಗುತ್ತಿಗಾರು, ಏನೇಕಲ್ಲು  ಆಸುಪಾಸಿನಲ್ಲಿ  ಆರಂಭವಾಗಿತ್ತು.  ಈ ಸಂದರ್ಭ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ಧನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರ ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡರು. ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಬಡೆಕ್ಕೋಡಿಯಿಂದ ಸುಬ್ರಹ್ಮಣ್ಯದ ಬಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜನಾರ್ಧನ ಅವರ ಕಾರನ್ನು ಗಣೇಶ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದರು.

ಸುಗಮ ವಾಹನ ಸಂಚಾರಕ್ಕೆ ಅರಣ್ಯ ಇಲಾಖಾ ಸಿಬಂದಿಗಳು ವ್ಯವಸ್ಥೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror