ಮಂಗಳೂರಿನಲ್ಲಿ ಹೈಎಲರ್ಟ್ : ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ : ಬಾಂಬ್ ನಿಷ್ಕ್ರಿಯ ಮಾಡುತ್ತಿರುವ ಸಿಬಂದಿಗಳು

January 20, 2020
4:15 PM

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ  ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ನಗರದಲ್ಲಿ  ಹೈ ಎಲರ್ಟ್ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದ್ದು ಯೋಧ ಗಂಗಯ್ಯ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ  ತೊಡಗಿದೆ. ಈಗ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ನಗರದ ವಿವಿದೆಡೆ ಭದ್ರತೆ ಕೈಗೊಳ್ಳಲಾಗಿದೆ.

ಬೆಳಗ್ಗೆ ಸುಮಾರು 10 ಗಂಟೆಗೆ ವಿಮಾನ ನಿಲ್ದಾಣದಲ್ಲಿ  ಅನುಮಾನಾಸ್ಪದವಾಗಿ ಬ್ಯಾಗ್ ಹಾಗೂ ಲಾಪ್ ಟಾಪ್ ಪತ್ತೆಯಾದ ಬಳಿಕ ಆತಂಕಕ್ಕೆ ಕಾರಣವಾಗಿತ್ತು.ಈ ಅನುಮಾನದ ಹಿನ್ನೆಲೆಯಲ್ಲಿ  ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ. ಲಾಪ್ ಟಾಪ್ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಪತ್ತೆಯಾಗಿತ್ತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಎಲ್ಲಾ ವಿಮಾನಗಳ ಹಾರಾಟದ ಮೇಲೆ ನಿಗಾ ಇಡಲಾಯಿತು. ಆದರೆ ಸದ್ಯ ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Advertisement

ಇದೀಗ ವಿಮಾನ ನಿಲ್ದಾಣಕ್ಕೆ 3 ಕಡೆಗಳಲ್ಲಿ  ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದ್ದು ಹೀಗಾಗಿ ಆತಂಕ ಹೆಚ್ಚಾಗಿದೆ. ಆದರೆ ಪೊಲೀಸ್ ಇಲಾಖೆ ಹಾಗೂ ಭದ್ರತಾ ಸಿಬಂದಿಗಳು ತಪಾಸಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಬಾಂಬ್ ನಿಷ್ಕ್ರಿಯ ಮಾಡುವ ಕೆಲಸ ನಡೆದಿದೆ. ಮೈದಾನದ ನಿರ್ಜನ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಲು ಸಿದ್ಧತೆ ಮಾಡಲಾಗಿತ್ತು.

ಬೆಳಗ್ಗೆ ಆಟೋದಲ್ಲಿ ಬಂದ ವ್ಯಕ್ತಿ ವಿಮಾನ ನಿಲ್ದಾಣದ ಒಳಗೆ ಬ್ಯಾಗ್ ಇಟ್ಟು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror