ಮಂಗಳೂರು ದಸರಾ ಸಂಪನ್ನ

October 9, 2019
10:28 PM

ಮಂಗಳೂರು: ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನದಿಂದ ಆರಂಭಗೊಂಡ ಮಂಗಳೂರು ದಸರಾ  ಸಂಪನ್ನಗೊಂಡಿತು.

ಸೆ.29ರಂದು  ಪ್ರತಿಷ್ಠಾಪನೆಗೊಂಡು ಪೂಜೆ-ಪುನಸ್ಕಾರ ಸ್ವೀಕರಿಸಿದ ದುರ್ಗೆಯರು ವಿಶೇಷ ಪೂಜೆ ಬಳಿಕ  ಅದ್ದೂರಿ ಮೆರವಣಿಗೆ ನಡೆಯಿತು.ಅಲಂಕೃತ ವಾಹನದಲ್ಲಿ ನಾರಾಯಣ ಗುರುಗಳ ಮೂರ್ತಿ, ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿದಾತ್ರಿ ಮತ್ತು ಆದಿಶಕ್ತಿಯರೊಂದಿಗೆ ಶಾರದಾ ಮಾತೆಯನ್ನಿರಿಸಿ ಮೆರವಣಿಗೆ ಆರಂಭಿಸಲಾಯಿತು.

Advertisement

ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್.ಲೋಬೊ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ್ ಆರ್, ಸದಸ್ಯರಾದ ಬಿ.ಕೆ.ತಾರಾನಾಥ್, ರವಿಶಂಕರ ಮಿಜಾರ್, ಅಭಿವೃದ್ಧಿ ಸಮಿತಿ ಸದಸ್ಯ ಜಯ ಸಿ.ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ಡಾ.ಬಿ.ಜಿ.ಸುವರ್ಣ ಮತ್ತಿತರರಿದ್ದರು.ನವರಾತ್ರಿ ಮಹೋತ್ಸವ ಸಂದರ್ಭ ಕುದ್ರೋಳಿ ಕ್ಷೇತ್ರಕ್ಕೆ ವಿವಿಧ ರೀತಿಯಲ್ಲಿ ಸೇವೆ ಸಲ್ಲಿಸಿದವರನ್ನು ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ್ ಆರ್.ಸನ್ಮಾನಿಸಿದರು.

ಮಂಗಳೂರು ದಸರಾ ಮೆರವಣಿಗೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡು ಮಣ್ಣಗುಡ್ಡ, ಲೇಡಿಹಿಲ್, ಲಾಲ್‌ಭಾಗ್, ಎಂ.ಜಿ.ರಸ್ತೆ, ಕೆ.ಎಸ್.ರಾವ್ ರಸ್ತೆ, ವಿ.ವಿ.ಕಾಲೇಜು ವೃತ್ತದಿಂದ ಬಲಕ್ಕೆ ಜಿ.ಎಚ್.ಎಸ್.ರಸ್ತೆ, ರಥಬೀದಿ, ಅಳಕೆ ಮೂಲಕ ಸುಮಾರು 9 ಕಿ.ಮೀ. ಸಾಗಿ ಮತ್ತೆ ಕುದ್ರೋಳಿ ಕ್ಷೇತ್ರ ತಲಪಿತು.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror