ಮಂಗಳೂರು : ಬಾಂಬ್ ಪತ್ತೆ ಪ್ರಕರಣ : ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಆದಿತ್ಯ

January 22, 2020
11:43 AM

ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ.  ಬೆಂಗಳೂರು ನಗರದ  ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್​ ಪೊಲೀಸ್​ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್​ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್​ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್​ ಬಾಂಬ್​ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್​ ನಿಷ್ಟ್ರಿಯ ದಳ ಬಾಂಬ್​ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror