ಮಂಗಳೂರು : ಬಾಂಬ್ ಪತ್ತೆ ಪ್ರಕರಣ : ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಆದಿತ್ಯ

January 22, 2020
11:43 AM

ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ.  ಬೆಂಗಳೂರು ನಗರದ  ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್​ ಪೊಲೀಸ್​ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್​ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್​ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್​ ಬಾಂಬ್​ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್​ ನಿಷ್ಟ್ರಿಯ ದಳ ಬಾಂಬ್​ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror