ಮಂಗಳೂರು ಬಾಂಬ್ ಪ್ರಕರಣ : ಸೀಎಂಗಿಂತಲೂ ಮಾಜಿ ಸೀಎಂ ಹೆಚ್ಚು ಪವರ್ ಫುಲ್ ಹೇಗೆ…..?

January 24, 2020
11:33 AM

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಪತ್ತೆಯಾಯಿತು. ಸರಕಾರದಿಂದ ತೊಡಗಿ ಎಲ್ಲಾ ಜನಪ್ರತಿನಿಧಿಗಳು  ವಿವಿಧ  ಹೇಳಿಕೆ ನೀಡಿದರು. ಮಾಧ್ಯಮಗಳು ನಿರ್ಧಾರ ನೀಡುವ ಹಂತಕ್ಕೆ ಬಂದಿದ್ದರು. ಸರ್ಕಾರ ಗೃಹ ಸಚಿವರು ತನಿಖೆ ತನಿಖೆ ಎಂದರು. ಮುಖ್ಯಮಂತ್ರಿಗಳು ಸಮಗ್ರ ತನಿಖೆ ಎಂದರು. ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇದೊಂದು ಠುಸ್ ಪಟಾಕಿ ಎಂದರು.

ಹಾಗಿದ್ದರೆ ಮಾಜಿ ಮುಖ್ಯಮಂತ್ರಿಗಳು ಅಷ್ಟು ಬೇಗನೆ ಮಾಹಿತಿ ಕಲೆ ಹಾಕಿದ್ದು ಹೇಗೆ ? ಪೊಲೀಸ್ ಇಲಾಖೆಯಲ್ಲಿ  ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡುವ ಆಪ್ತರು ಯಾರು ಇತ್ಯಾದಿ ಪ್ರಶ್ನೆಗಳು ಕುತೂಹಲಕಾರಿ…!. ಅಷ್ಟೇ ಅಲ್ಲ, ಅಷ್ಟೊಂದು ಪವರ್ ಫುಲ್ ಹೇಗೆ ?.

ಮಾಜಿಯಾಗಿದ್ದರೂ ಎಲ್ಲಾ ಇಲಾಖೆಗಳಿಂದಲೂ ತಕ್ಷಣವೇ ಮಾಹಿತಿ ಪಡೆದುಕೊಳ್ಳುವ ಚಾಕಚಕ್ಯತೆ ಇರುವ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳೂರು ಬಾಂಬ್ ಪ್ರಕರಣದಲ್ಲೂ ತಕ್ಷಣ ಮಾಹಿತಿ ಪಡೆದರೆ ಪೊಲೀಸ್ ಇಲಾಖೆಯ ವೈಫಲ್ಯಗಳು ಹಾಗೂ ಮಾಹಿತಿ ಸೋರಿಕೆ ಬಗ್ಗೆಯೂ ಈ ಘಟನೆ ಸಾಕ್ಷಿಯಾಗಿದೆ. ಗುಪ್ತಚರ ಇಲಾಖೆ ಇದ್ದರೂ ಸರಕಾರಕ್ಕಿಂತಲೂ ಹೆಚ್ಚು ನಿಖರವಾದ ಮಾಹಿತಿಯನ್ನು ಎಚ್ ಡಿ ಕುಮಾರಸ್ವಾಮಿ ಹೇಗೆ ಪಡೆದರು ಎಂಬುದು ಗಮನಾರ್ಹವಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಇದೊಂದು ಎಚ್ಚರಿಕೆಯ ಪಾಠವೂ ಆಗಿದೆ.

ಈ ನಡುವೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದಿದ್ದಾರೆ. ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು  ಎಂಬ ಭಾವನೆ ಇರಬಾರದು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ  ಮಂಗಳೂರು ಬಾಂಬ್ ಪ್ರಕರಣವು ಜನಪ್ರತಿನಿಧಿಗಳ, ಪೊಲೀಸ್ ಇಲಾಖೆಯ, ಗುಪ್ತಚರ ಇಲಾಖೆಯ, ಮಾಧ್ಯಮಗಳ, ನೂತನ ಆವಿಷ್ಕಾರಗಳ ಮುಖವನ್ನು ಅನಾವರಣ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror