ಮಂಜೇಶ್ವರದಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿ

September 29, 2019
3:35 PM

ಕಾಸರಗೋಡು: ಅ.21 ರಂದು ನಡೆಯಲಿರುವ ಮಂಜೇಶ್ವರ ವಿಧಾನಸಭೆಯ ಉಪಚುನಾವಣೆಯಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು.

ಐದು ಕಡೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್ ಕೋನಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇನ್ನುಳಿದಂತೆ ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಎಸ್. ಸುರೇಶ್, ಎರ್ಣಾಕುಳಂ ಕ್ಷೇತ್ರದಲ್ಲಿ ಸಿ.ಜಿ. ರಾಜಗೋಪಾಲ್, ಅರೂರ್ ಕ್ಷೇತ್ರದಲ್ಲಿ ಕೆ.ಪಿ. ಪ್ರಕಾಶ್ ಬಾಬು ಅಭ್ಯರ್ಥಿಗಳಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೆ. ಸುರೇಂದ್ರನ್ ಪತ್ತನಂತಿಟ್ಟದಲ್ಲಿ ಮತ್ತು ಕೆ.ಪಿ. ಸುರೇಶ್ ಬಾಬು ಕೋಝಿಕೋಡ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೆ. ಸುರೇಂದ್ರನ್ ಕೇವಲ 89 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಅಂದು ನಷ್ಟವಾದ ಕ್ಷೇತ್ರವನ್ನು ಮರಳಿ ಪಡೆಯಲು ಈ ಬಾರಿ ರವೀಶ ತಂತ್ರಿ ಅವರನ್ನು ಪಕ್ಷ ಕಣಕ್ಕಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror