ಮಠಂತಬೆಟ್ಟು ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಧಾರ್ಮಿಕ ಪ್ರವಚನ

October 4, 2019
7:36 PM
ಪುತ್ತೂರು: ಪುತ್ತೂರು ತಾಲೂಕಿನ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ನವರಾತ್ರಿಯ ಪ್ರಯುಕ್ತ ಧಾರ್ಮಿಕ ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ಚೇತನಾ ಮಾತನಾಡಿ “ದೇವಿಯನ್ನು ವಿವಿಧ ರೂಪದಲ್ಲಿ ಆರಾಧನೆ ಮಾಡಲಾಗುತ್ತದೆ. ಕುಲದೇವಿಯಾಗಿ,ಗ್ರಾಮದೇವಿಯಾಗಿ ,ಹಾಗೂ ಶಕ್ತಿ ಪೀಠಗಳಲ್ಲಿ ದೇವಿಯ ಉಪಾಸನೆಯನ್ನು ಮಾಡಲಾಗುತ್ತದೆ. ನವರಾತ್ರಿ ಇದು ದೇವಿಯ ಉಪಾಸನೆ ಮಾಡುವ ಹಿಂದೂ ಧರ್ಮದ ಹಬ್ಬ.ನವರಾತ್ರಿಯಲ್ಲಿ ದೇವಿಯನ್ನು ಒಂಭತ್ತು ರೂಪದಲ್ಲಿ ಪೂಜಿಸಲಾಗುತ್ತದೆ.ನವರಾತ್ರಿಯ ಸಪ್ತಮಿಯ ಮೂಲಾ ನಕ್ಷತ್ರದಂದು ಪುಸ್ತಕಗಳು, ಚಿನ್ನ-ಬೆಳ್ಳಿಗಳನ್ನು ಪೂಜೆ ಮಾಡುತ್ತಾರೆ. ಹಾಗೆಯೇ ಅಷ್ಟಮಿಯ ದಿನದಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ.ನವಮಿಯಂದು ಆಯುಧ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿಯ ಕೊನೆಯ ದಿನ ವಿಜಯದಶಮಿಯನ್ನು ಆಚರಣೆ ಮಾಡಲಾಗುತ್ತದೆ ಎಂದರು.
ನವರಾತ್ರಿ ಮೊದಲ ಮೂರು ದಿನಗಳಲ್ಲಿ ತಮೋಗುಣವನ್ನು ಕಡಿಮೆಮಾಡಲು ಮಹಾಕಾಳಿಯ,ನಂತರದ ಮೂರು ದಿನಗಳಲ್ಲಿ ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ, ಹಾಗೂ ಕೊನೆಯ ಮೂರು ದಿನಗಳಲ್ಲಿ ಸಾತ್ತ್ವಿಕತೆಯನ್ನು ವೃಧ್ದಿಸಲು ಮಹಾಸರಸ್ವತಿಯ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿ ಸಂದರ್ಭದಲ್ಲಿ ಶ್ರೀ ದೇವಿಯ ತತ್ವವು ನಿತ್ಯದ ತುಲನೆಯಲ್ಲಿ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾತ್ತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮಳಿಗೆಯನ್ನು ಹಮ್ಮಿಕೊಳ್ಳಲಾಯಿತು.
Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ
June 25, 2025
6:32 AM
by: The Rural Mirror ಸುದ್ದಿಜಾಲ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group