ಮಠಂತಬೆಟ್ಟು ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಧಾರ್ಮಿಕ ಪ್ರವಚನ

October 4, 2019
7:36 PM
ಪುತ್ತೂರು: ಪುತ್ತೂರು ತಾಲೂಕಿನ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನಾತನ ಸಂಸ್ಥೆಯ ವತಿಯಿಂದ ನವರಾತ್ರಿಯ ಪ್ರಯುಕ್ತ ಧಾರ್ಮಿಕ ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ಚೇತನಾ ಮಾತನಾಡಿ “ದೇವಿಯನ್ನು ವಿವಿಧ ರೂಪದಲ್ಲಿ ಆರಾಧನೆ ಮಾಡಲಾಗುತ್ತದೆ. ಕುಲದೇವಿಯಾಗಿ,ಗ್ರಾಮದೇವಿಯಾಗಿ ,ಹಾಗೂ ಶಕ್ತಿ ಪೀಠಗಳಲ್ಲಿ ದೇವಿಯ ಉಪಾಸನೆಯನ್ನು ಮಾಡಲಾಗುತ್ತದೆ. ನವರಾತ್ರಿ ಇದು ದೇವಿಯ ಉಪಾಸನೆ ಮಾಡುವ ಹಿಂದೂ ಧರ್ಮದ ಹಬ್ಬ.ನವರಾತ್ರಿಯಲ್ಲಿ ದೇವಿಯನ್ನು ಒಂಭತ್ತು ರೂಪದಲ್ಲಿ ಪೂಜಿಸಲಾಗುತ್ತದೆ.ನವರಾತ್ರಿಯ ಸಪ್ತಮಿಯ ಮೂಲಾ ನಕ್ಷತ್ರದಂದು ಪುಸ್ತಕಗಳು, ಚಿನ್ನ-ಬೆಳ್ಳಿಗಳನ್ನು ಪೂಜೆ ಮಾಡುತ್ತಾರೆ. ಹಾಗೆಯೇ ಅಷ್ಟಮಿಯ ದಿನದಂದು ಮಹಾಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ.ನವಮಿಯಂದು ಆಯುಧ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿಯ ಕೊನೆಯ ದಿನ ವಿಜಯದಶಮಿಯನ್ನು ಆಚರಣೆ ಮಾಡಲಾಗುತ್ತದೆ ಎಂದರು.
ನವರಾತ್ರಿ ಮೊದಲ ಮೂರು ದಿನಗಳಲ್ಲಿ ತಮೋಗುಣವನ್ನು ಕಡಿಮೆಮಾಡಲು ಮಹಾಕಾಳಿಯ,ನಂತರದ ಮೂರು ದಿನಗಳಲ್ಲಿ ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ, ಹಾಗೂ ಕೊನೆಯ ಮೂರು ದಿನಗಳಲ್ಲಿ ಸಾತ್ತ್ವಿಕತೆಯನ್ನು ವೃಧ್ದಿಸಲು ಮಹಾಸರಸ್ವತಿಯ ಪೂಜೆಯನ್ನು ಮಾಡಲಾಗುತ್ತದೆ.ನವರಾತ್ರಿ ಸಂದರ್ಭದಲ್ಲಿ ಶ್ರೀ ದೇವಿಯ ತತ್ವವು ನಿತ್ಯದ ತುಲನೆಯಲ್ಲಿ ಸಾವಿರ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾತ್ತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮಳಿಗೆಯನ್ನು ಹಮ್ಮಿಕೊಳ್ಳಲಾಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror