ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್ಗೆ ಸ್ಕ್ರೀನ್ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಗಮನಿಸಿದ ಜೈಲು ಸಿಬ್ಬಂದಿಗಳು ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಆತ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel