ಮಡಿಕೇರಿ ದಸರಾ ಜನೋತ್ಸವಕ್ಕೆ 1 ಕೋಟಿ ರೂ. : ಸಿಎಂ ಭರವಸೆ

September 13, 2019
12:00 PM

ಮಡಿಕೇರಿ:ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾ ಜನೋತ್ಸವ ಆಚರಣೆಗೆ 1 ಕೋಟಿ ರೂ. ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಡಿಕೇರಿ ದಸರಾ ಸಮಿತಿಯ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ನಗರ ದಸರಾ ಸಮಿತಿ ನಿಯೋಗವು ದಸರಾ ಉತ್ಸವಾಚರಣೆಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು 1 ಕೋಟಿ ರೂ. ಅನುದಾನ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದಾರೆ.

ದಸರಾ ಸಮಿತಿ ನಿಯೋಗದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಹ್ಮಣಿ, ದಸರಾ ಸಮಿತಿ ಅಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ಉಪಾಧ್ಯಕ್ಷ ನೆರವಂಡ ಜೀವನ್, ಖಜಾಂಜಿ ಉಮೇಶ್ ಸುಬ್ರಹ್ಮಣಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್.ಬಿ.ರವಿ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror