ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

August 22, 2020
12:50 PM

ಮಂಗಳೂರು : ಭಾರತ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021 ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಹೊರಡಿಸಿರುತ್ತದೆ.

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಚಟುವಟಿಕೆಗಳು:- ಆಗಸ್ಟ್ 10 ರಿಂದ ನವೆಂಬರ್ 15 ರವರೆಗೆ ನಡೆಯಲಿದೆ. ಕರಡು ಮತದಾರರ ಪಟ್ಟಿಯ ಪ್ರಕಟಣೆ ನವೆಂಬರ್ 16, ಹಕ್ಕು ಮತ್ತು ಆಕ್ಷೇಪಣೆಗಳನ್ನು ನವೆಂಬರ್ 16 ರಿಂದ ಡಿಸೆಂಬರ್ 15 ರವರೆಗೆ ಸ್ವೀಕರಿಸಲಾಗುವ್ಯದು. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಜನವರಿ 5, ಅಂತಿಮ ಮತದಾರರ ಪಟ್ಟಿ ಜನವರಿ 15 ರಂದು ಪ್ರಕಟಗೊಳ್ಳಲಿದೆ.

ಮಂಗಳೂರು ಉತ್ತರ, ದಕ್ಷಿಣ, ಮಂಗಳೂರು, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಿಗೆ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್( 9900111150) ಹಾಗೂ ಬೆಳ್ತಂಗಡಿ, ಪುತ್ತೂರು, ಸುಳ್ಯ ಕ್ಷೇತ್ರಗಳಿಗೆ ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್(9535618438) ಮತದಾರರ ನೋಂದಣಾಧಿಕಾರಿಗಳಾಗಿದ್ದಾರೆ.

ಸಹಾಯಕ ಮತದಾರರ ನೋಂದಣಾಧಿಕಾರಿಯವರ ವಿವರಗಳು ಇಂತಿವೆ:

ಬೆಳ್ತಂಗಡಿ ಕ್ಷೇತ್ರ: ತಹಶೀಲ್ದಾರರು ಬೆಳ್ತಂಗಡಿ, ಮಹೇಶ್, ಮೊಬೈಲ್ ಸಂಖ್ಯೆ: 9902434583.
ಮೂಡಬಿದ್ರೆ ಕ್ಷೇತ್ರ: ತಹಶೀಲ್ದಾರರು ಮೂಡಬಿದ್ರೆ, ಅನಿತಾಲಕ್ಷ್ಮಿ ಮೊಬೈಲ್:7042976487,
ಮಂಗಳೂರು ನಗರ ಉತ್ತರ ಕ್ಷೇತ್ರ: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಮಂಗಳೂರು ಟಿ.ಜಿ. ಗುರುಪ್ರಸಾದ್ ಮೊಬೈಲ್: 96114731433
ಮಂಗಳೂರು ನಗರ ದಕ್ಷಿಣ ಕ್ಷೇತ್ರ: ಸಹಾಯಕ ಮತದಾರರ ನೋಂದಣಾಧಿಕಾರಿ-ಕಂದಾಯ ಅಧಿಕಾರಿ ಮಹಾನಗರಪಾಲಿಕೆ ಮಂಗಳೂರು, ವಿಜಯ ಕುಮಾರ್, ಮೊಬೈಲ್: 9448177302,
ಮಂಗಳ್ರರು ಕ್ಷೇತ್ರ: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಮಂಗಳೂರು ಟಿ.ಜಿ. ಗುರುಪ್ರಸಾದ್ ಮೊಬೈಲ್: 96114731433
ಬಂಟ್ವಾಳ ಕ್ಷೇತ್ರ: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಬಂಟ್ವಾಳ, ರಶ್ಮಿ ಮೊಬೈಲ್: 9972061514,
ಪುತ್ತೂರು ಕ್ಷೇತ್ರ: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಪುತ್ತೂರು, ರಮೇಶ್ ಬಾಬು, ಮೊಬೈಲ್ :94801688694.
ಸುಳ್ಯ ಕ್ಷೇತ್ರ: ಸಹಾಯಕ ಮತದಾರರ ನೋಂದಣಾಧಿಕಾರಿ-ತಹಶೀಲ್ದಾರರು ಸುಳ್ಯ, ಅನಂತಶಂಕರ್, ಮೊಬೈಲ್: 9902541695.

ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯವಿರುವ ದಾಖಲೆಗಳು:
ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣ ಪತ್ರ , ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‍ಪೋರ್ಟು, ಎಸ್.ಎಸ್.ಎಲ್.ಸಿ/ಪಿಯುಸಿ ಅಂಕಪಟ್ಟಿ, ಪಾನ್ ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರ.

ವಾಸಸ್ಥಳದ ಬಗ್ಗೆ ದಾಖಲೆಗಳು: ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್‍ಬುಕ್, ಪಾಸ್ ಪೋರ್ಟ್, ವಾಹನ ಚಾಲನ ಪರವಾನಿಗೆ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರದಾಖಲೆಗಳು. ಒಂದು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು.

ಯಾವುದಕ್ಕೆ ಯಾವ ಅರ್ಜಿ: ನಮೂನೆ-6: 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸಿದವರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು.
ನಮೂನೆ-6ಎ: ಅನಿವಾಸಿ ಭಾರತೀಯರುಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು, ನಮೂನೆ-7: ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು. ನಮೂನೆ-8: ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದ ದೋಷಗಳಿದ್ದರೆ ಸರಿಪಡಿಸಿಕೊಳ್ಳಲು, ಸಮೂನೆ-8ಎ: ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಿರುವ ಅರ್ಜಿ.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು. ವೆಬ್‍ಪೋರ್ಟಲ್ www.ceokarnataka.kar.nic.in ಮತ್ತು www.nvsp.in,, ಮತದಾರರ ಸಹಾಯವಾಣಿ 1950 ಸಂಖ್ಯೆ ಕರೆಮಾಡಿ ಮಾಹಿತಿ ಪಡೆಯಬಹುದು. ಹಾಗೂ ಈ ಕೇಂದ್ರಗಳಿಗೆ ಭೇಟಿನೀಡಿ ಮತದಾರರ ಪಟ್ಟಿಗಳಲ್ಲಿ ಹೆಸರು ನೊಂದಾಯಿಸುವ ಬಗ್ಗೆ ತಿದ್ದುಪಡಿ ಬಗ್ಗೆ ಪರಿಶೀಲಿಸಬಹುದು ಎಂದು ದ.ಕ ಜಿಲ್ಲಾ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror