ಮತ್ತೆ ಮತ್ತೆ ಅಡಿಕೆ ತೋಟ ವಿಸ್ತರಣೆ

May 23, 2019
9:00 AM

ಈ ಬೇಸಿಗೆಯಂತು ಅಡಿಕೆ ಕೃಷಿಕರ ಭವಿಷ್ಯವನ್ನು ಮುರುಟಿಸಿ ಆಯಿತು. ತೋಟಕ್ಕೆ ನೀರಿಲ್ಲದೆ ಅನೇಕ ತೋಟಗಳಲ್ಲಿ ಅಡಿಕೆ ಮರದ ತುದಿ ಒಣಗಿ ಕೆಳಗೆ ಬೀಳುವ ಹಂತದಲ್ಲಿದೆ. ಒಣಗಿ ಸಾಯದ ತೋಟಗಳಲ್ಲಿ ಎರಡು ಮೂರು ಸೋಗೆ ಬಣ್ಣ ಬದಲಿಸಿದ್ದು ಇನ್ನು ಒಂದು ವಾರ ಮಳೆ ಕಣ್ಣಾಮುಚ್ಚಾಲೆಯಾಡಿದರೆ ಅಂತಹ ತೋಟಗಳದ್ದು ಕೂಡ ಅದೇ ಪರಿಸ್ಥಿತಿ. ಇದಲ್ಲದೆ ದೊಡ್ದ ಪ್ರಮಾಣದಲ್ಲಿ ತೋಟಗಳು ಒಂದಷ್ಟು ಬಾಡಿಕೊಂಡಿದ್ದು ಈ ತೋಟಗಳಿಗೆ ಕೃಷಿಕರು ಯಥಾನುಶಕ್ತಿ ನೀರುಣಿಸಿ ಸಮಾಧಾನ ಪಟ್ಟುಕೊಳ್ಳುತ್ತಿದ್ದಾರೆ. ಬೆಳಿಗ್ಗೆ ನೀರು ಬಿಟ್ಟರೆ ಸಂಜೆಯ ವೇಳೆಗೆ ಯಾವ ತಟ್ಟಿಗೆ ನೀರಾವರಿ ಆಯಿತು ಎಂದು ತಿಳಿಯಲಾರದಂತೆ ಅವರ ನೀರಿನ ಶಕ್ತಿ ಇರುತ್ತದಷ್ಟೆ. ಇಂತಹ ತೋಟಗಳ ಮರಗಳು ಉಳಿದು ಬಿಟ್ಟಾವು ಹೊರತು ಫಸಲು ಬಹುತೇಕ ಮಳೆ ಸುರಿದ ನಂತರ ನೆಲ ಸೇರಬಹುದು.
ಇನ್ನು ನಮಗೆಲ್ಲ ಕಾಣುವಾಗ ಭಾರೀ ನೀರಿನ ಅನುಕೂಲ ಇರುವಂತೆ ತೋರುವ ಕೃಷಿಕರು ದೊಡ್ಡ ಸಂಖ್ಯೆಯಲ್ಲಿ ಏನೂ ಇಲ್ಲ. ಅವರ ತೋಟಕ್ಕೆ ಯಥೇಚ್ಛ ನೀರಾವರಿ ಒದಗಬಹುದು. ರಾತ್ರೆ ಹಗಲು ನೀರು ಧಾರಾಳ ಹಾಕುವುದರಿಂದ ತೋಟದ ಅಡಿಕೆ ಮರಗಳು ಬಾಡುವ ಪ್ರಮೇಯ ಇಲ್ಲ. ಆದರೆ ಫಸಲು ಖಂಡಿತವಾಗಿ ನಿರೀಕ್ಷಿತ ಮಟ್ಟದಲ್ಲಿ ಇರಲಾರದು. ಯಾಕೆಂದರೆ ಬುಡಕ್ಕೆ ಎಷ್ಟೇ ನೀರಾವರಿ ಮಾಡಿದರೂ ಹವಾಮಾನದಲ್ಲಿನ ಸುಡುಬಿಸಿಲು ಮರದ ತುದಿಯ ಫಸಲಿಗೆ ಕೇಡುಬಗೆಯದಿರದು ಎಂಬುದು ಎಲ್ಲರಿಗೂ ತಿಳಿದ ವಿಷಯ. ಎಷ್ಟಿದ್ದರೂ ಈ ವರ್ಷದ ನೀರಾವರಿ ಸಮಸ್ಯೆ ಪ್ರತಿವರ್ಷ ಮುಂದುವರಿದಿದ್ದೇ ಆದರೆ ಅಡಿಕೆ ಕೃಷಿಯನ್ನು ಮುಂದುವರಿಸುವುದು ಕಷ್ಟವಾಗಬಹುದು. ಪ್ರತಿ ವರ್ಷ ಅಡಿಕೆ ಮರದ ತುದಿಯನ್ನಷ್ಟೆ ಉಳಿಸುವ ಏಕಮಾತ್ರ ಕಾರ್ಯ ಸಾಧ್ಯವಾದರೆ ಕೃಷಿಕನಿಗೆ ಆದಾಯ ಎಲ್ಲಿಂದ ಬರಬೇಕು?

ಇದಿಷ್ಟು ವಾಸ್ತವದ ಚಿತ್ರಣವಾದರೆ ಅದರ ಜೊತೆಗೆ ಇನ್ನೂ ಒಂದು ಸಂಗತಿ ಇದೆ. ಅದು ಹೊಸ ತೋಟ ವಿಸ್ತರಣೆಯ ಕಾರ್ಯ. ನಾನು ಮೊನ್ನೆ ಪುತ್ತೂರಿನಿಂದ ಬಸ್ಸಿನಲ್ಲಿ ಬರುತ್ತಿದ್ದೆ. ಪುತ್ತೂರು ಪಾಣಾಜೆ ದಾರಿಯಲ್ಲಿ ಒಂದು ಗುಡ್ಡದಲ್ಲಿ ಬೆಳೆದಿದ್ದ ಹಸಿರನ್ನು ಪೂರ್ತಿ ಸವರಿ ಅಲ್ಲಿ ಅಡಿಕೆ ಗಿಡ ನಡಲು ಗುರುತುಹಾಕಿಯಾಗಿತ್ತು. ಏನಿದ್ದರೂ ಸರಿಸುಮಾರು ಒಂದು ಸಾವಿರ ಗಿಡ ನಿಲ್ಲಬಹುದಾದಷ್ಟು ದೊಡ್ಡ ಗುಡ್ಡ. ಮಳೆ ಬರುವುದನ್ನೇ ಕಾಯುವಂತೆ ಇತ್ತು ಅಲ್ಲಿಯ ಸ್ಥಿತಿ. ಇದು ಒಂದು ಗುಡ್ದದಲ್ಲಿ ನಡೆದ ತೋಟ ವಿಸ್ತರಣೆಯ ಸಂಗತಿ. ಇನ್ನೂ ಅನೇಕ ಕಡೆ ಇಂತಹ ದುಸ್ಸಾಹಸಕ್ಕೆ ಕೈಹಾಕಿದ ಕೃಷಿಕರು ಕಾಣಸಿಗುತ್ತಾರೆ. ತೋಟ ವಿಸ್ತಾರದ ಅಗತ್ಯದ ಬಗ್ಗೆ ಮಾತನಾಡಿದರೆ ನಾವು ಮುನ್ನೂರೊ ನಾನ್ನೂರೊ ಅಡಿಕೆ ಗಿಡ ನಟ್ಟರೆ ಅದರಲ್ಲಿ ಏನಾಗಲಿದೆ. ಸಮುದ್ರಕ್ಕೆ ಬೊಗಸೆ ನೀರು ಹಾಕಿದರೆ ಅದಕ್ಕೆ ಹೆಚ್ಚು ಅಂತ ಕಾಣುತ್ತದೆಯೇ ಎಂಬ ಮಾರುತ್ತರ ಬರುತ್ತದೆ. ಒಂದು ಕೊಳವೆಬಾವಿ ಕೊರೆದು ತೃಪ್ತಿದಾಯಕ ನೀರಿದ್ದರೆ ತೋಟ ವಿಸ್ತರಣೆಯ ಹುಚ್ಚು ಜೋರಾಗಿಯೇ ಇರುತ್ತದೆ. ಅಡಿಕೆ ಕೃಷಿ ಕಷ್ಟ ಕಷ್ಟ ಅಂತ ಬೊಬ್ಬೆ ಹೊಡೆಯುವ ಮಂದಿಯೇ  ಸದ್ದಿಲ್ಲದೆ ಸದ್ದು ಮಾಡುವ ಹಿಟಾಚಿ ತಂದು ಗುಡ್ದದಲ್ಲಿ ಹೊಂಡ ತೆಗೆಸುತ್ತಾರೆ. ಇನ್ನೇನು ಮಳೆ ಬಿದ್ದೊಡನೆ ಗಿಡ ನೆಡುವ ಕಾಯಕ. ನಂತರ ನಾನು ಅಷ್ಟು ಗಿಡ ನೆಟ್ಟುಬಿಟ್ಟೆ ಭಾವ ಅಂತ ಮೀಸೆ ಎಳೆಯುವ ಕೆಲಸ.

ಇದೆಲ್ಲ ಬೇಕ? ಇನ್ನೂ ವಿಸ್ತರಣೆ ಮಾಡುವ ಹುಚ್ಚು ಯಾಕೆ? ವಾಸ್ತವ ಸಂಗತಿಗಳ ಅರಿವಿದ್ದು ಕೂಡ ಮತ್ತೆ ಮತ್ತೆ ತೋಟ ವಿಸ್ತರಣೆ ಮಾಡಿ ಹಣ ಕೂಡಿಡುವೆ ಎಂಬ ಆಸೆ ಯಾಕೆ? ಒಂದೆಡೆ ಅಂತರ್ಜಲ ಬತ್ತಿದೆ. ಕೊಳವೆ ಬಾವಿ ಆಳಕ್ಕೆ ತೋಡಿದಷ್ಟೂ ನೀರಿಲ್ಲದ ಸಂಗತಿ. ಹತ್ತು ಹನ್ನೆರಡು ಸ್ಪ್ರಿಂಕ್ಲರ್ ಕೆಲಸ ಮಾಡುವ ಧಾರಾಳ ನೀರಿದ್ದವನಿಗೆ ಕಡಿಮೆಯಾಗುತ್ತಾ ಬಂದು ಪೂರ್ತಿ ಕೈಕೊಟ್ಟ ಅದೆಷ್ಟೊ ಪ್ರಸಂಗಗಳಿವೆ. ಇಂತಹ ಅನೇಕ ಉದಾಹರಣೆಗಳು ಇದ್ದಾಗಲೂ ತೋಟ ವಿಸ್ತರಣೆಯ ಭ್ರಮೆಯಿಂದ ನಮ್ಮ ಕೃಷಿಕರು ಹೊರಗೆ ಬರುವುದು ಯಾವಾಗ? ಇದ್ದ ತೋಟಗಳನ್ನು ನೋಡಿಕೊಳ್ಳಲು ಅವುಗಳ ಕೆಲಸಗಳನ್ನು ಗಮನಿಸಲು ಬೇಕಾದಷ್ಟು ಜನರಿಲ್ಲದೆ ಬಸವಳಿಯುತ್ತಿರುವ ಸಂದರ್ಭದಲ್ಲಿ ಮತ್ತೆ ಅಡಿಕೆ ಗಿಡಗಳಿಗಾಗಿ ಹಾತೊರೆಯುವ ಕೃಷಿಕರಿಗೆ ಏನೆನ್ನಬೇಕು?  ಹೊಸದಾಗಿ ತೋಟ ಮಾಡುವುದಕ್ಕಿಂತ ಇದ್ದ ತೋಟಗಳನ್ನು ಜೋಪಾನವಾಗಿ ನೋಡಿಕೊಳ್ಳುವುದರಲ್ಲಿ ಹೆಚ್ಚು ಲಾಭವಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಶಂ. ನಾ. ಖಂಡಿಗೆ

ಕೃಷಿಕ, ಬರಹಗಾರರು

ಇದನ್ನೂ ಓದಿ

ಏನಾಗ್ತಾ ಇದೆ ಶಿಕ್ಷಣದಲ್ಲಿ ಎಂತ ಯಾರಾದ್ರೂ ಕೇಳ್ತಾರಾ?
October 8, 2025
9:53 PM
by: ಡಾ.ಚಂದ್ರಶೇಖರ ದಾಮ್ಲೆ
ಸಸ್ಯ ಪರಿಚಯ | ಮರಳಿ ತನ್ನಿ ಮರೆತ ಸೊಪ್ಪು – ತುಂಬೆ ಗಿಡ
October 8, 2025
7:25 AM
by: ಜಯಲಕ್ಷ್ಮಿ ದಾಮ್ಲೆ
ಹೊಸರುಚಿ | ಹಲಸಿನ ಬೀಜದ ರೊಟ್ಟಿ
October 4, 2025
10:26 AM
by: ದಿವ್ಯ ಮಹೇಶ್
ವ್ಯಕ್ತಿ ಮತ್ತು ವ್ಯಕ್ತಿತ್ವ
October 3, 2025
3:19 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?

ಪ್ರಮುಖ ಸುದ್ದಿ

MIRROR FOCUS

ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ
October 9, 2025
6:48 AM
by: The Rural Mirror ಸುದ್ದಿಜಾಲ
ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ
October 9, 2025
6:42 AM
by: The Rural Mirror ಸುದ್ದಿಜಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ

Editorial pick

ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಕೃಷಿಗೆ ಕಾಡಾನೆ ಹಾವಳಿ, ಚಿರತೆ ದಾಳಿ | ಕಾರ್ಯಪಡೆಗಳಿಗೆ ಸಿಬಂದಿಗಳ ನಿಯೋಜನೆ
October 7, 2025
6:25 AM
by: The Rural Mirror ಸುದ್ದಿಜಾಲ

ವಿಡಿಯೋ

ಕರುಣಾಮಯಿ ತಾಯಿ..
September 19, 2025
10:05 PM
by: ದ ರೂರಲ್ ಮಿರರ್.ಕಾಂ
ಉದ್ಯಮ ಹಾಗೂ ಸಮಾಜ ಸೇವೆ
September 19, 2025
10:03 PM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ
October 9, 2025
7:05 AM
by: The Rural Mirror ಸುದ್ದಿಜಾಲ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ
October 9, 2025
7:01 AM
by: The Rural Mirror ಸುದ್ದಿಜಾಲ
ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ
October 9, 2025
6:48 AM
by: The Rural Mirror ಸುದ್ದಿಜಾಲ
ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ
October 9, 2025
6:42 AM
by: The Rural Mirror ಸುದ್ದಿಜಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ
ಏನಾಗ್ತಾ ಇದೆ ಶಿಕ್ಷಣದಲ್ಲಿ ಎಂತ ಯಾರಾದ್ರೂ ಕೇಳ್ತಾರಾ?
October 8, 2025
9:53 PM
by: ಡಾ.ಚಂದ್ರಶೇಖರ ದಾಮ್ಲೆ
ಹವಾಮಾನ ವರದಿ | 08-10-2025 | ಎಲ್ಲೆಲ್ಲಿ ಹೇಗಿದೆ ಮಳೆಯ ಲಕ್ಷಣ..? | ವಾಯುಭಾರ ಕುಸಿತ ಏನಾಗುತ್ತಿದೆ…?
October 8, 2025
2:04 PM
by: ಸಾಯಿಶೇಖರ್ ಕರಿಕಳ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದ ಮಳೆಗಾಲದ ಸಂಪರ್ಕಕ್ಕೆ ಕಾಲು ಸಂಕ | 234 ಕಾಲು ಸಂಕ ನಿರ್ಮಾಣಕ್ಕೆ 60 ಕೋಟಿ
September 16, 2025
6:33 AM
by: The Rural Mirror ಸುದ್ದಿಜಾಲ
ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ
September 10, 2025
6:35 AM
by: The Rural Mirror ಸುದ್ದಿಜಾಲ

OPINION

ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗಣತಿದಾರರ ಒಂದು ದಿನ | ಗ್ರಾಮೀಣ ಭಾಗದಲ್ಲಿ ಆಗಬೇಕಿರುವ ಗಣತಿ ಯಾವುದು…?
September 28, 2025
4:04 PM
by: ದ ರೂರಲ್ ಮಿರರ್.ಕಾಂ
ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು
September 23, 2025
11:05 AM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group