ಮತ್ತೊಮ್ಮೆ ಸ್ವಾತಂತ್ರ್ಯ- ಸೆ.10 ರಂದು ಹಕ್ಕೊತ್ತಾಯ ಸಭೆ

August 9, 2019
9:48 AM

ಸುಳ್ಯ: ಸುಳ್ಯ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ಸಮರ್ಪಕ ರೀತಿಯಲ್ಲಿ ಸೇವೆ ಸಿಗದಿರುವ ಬಗ್ಗೆ ಜನ ಜಾಗೃತಿ ಮೂಡಿಸಿ ಹಕ್ಕೊತ್ತಾಯ ಸಭೆ ನಡೆಸಲು ಮಲೆನಾಡ ಜಂಟಿ ಕ್ರಿಯಾ ಸಮಿತಿ ಸುಳ್ಯ ನಿರ್ಧರಿಸಿದೆ. ಮತ್ತೊಮ್ಮೆ ಸ್ವಾತಂತ್ರ್ಯ ಎಂಬ ಹೆಸರಿನಲ್ಲಿ ಸೆ.1೦ ರಂದು ಇದನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಕೆ.ಎಲ್.ಪ್ರದೀಪ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement

ಸುಳ್ಯ ತಾಲೂಕಿನಲ್ಲಿ ಇರುವ ಹಲವಾರು ಸರ್ಕಾರಿ ಕಚೇರಿಗಳಲ್ಲಿ 2೦೦೦ಗಳಸ್ಟು ಸರ್ಕಾರಿ ನೌಕರರಿದ್ದಾರೆ ಅವರುಗಳೆಲ್ಲ ಸಮರ್ಪಕವಾಗಿ ಸೇವೆ ನೀಡುತ್ತಿದ್ದಾರೆಯೇ ಅಥವಾ ಅವರಿಂದ ಸಮರ್ಪಕವಾಗಿ ಸೇವೆ ಪಡೆಯಲು ಸಾದ್ಯವಾಗುತ್ತಿದೆಯೇ ಎಂಬ ವಿಮರ್ಶೆ ಮಾಡಬೇಕಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗ ಸೇರಿ ಇದನ್ನು ಸರಿ ಮಾಡಬೇಕಾಗಿತ್ತು. ಅವು ವಿಫಲವಾಗಿರುವ ಕಾರಣ ಎಚ್ಚರಿಸುವ ಕೆಲಸ ಜನರೇ ಮಾಡಬೇಕು ಅದಕ್ಕಾಗಿ ಸೆ10 ರಂದು ಹಕ್ಕೊತ್ತಾಯ ಪ್ರತಿಭಟನಾ ಸಭೆಯನ್ನು ಆಯೋಜಿಸಿದ್ದೇವೆ. ಸಮಾಜದ ಎಲ್ಲ ವರ್ಗದ ಜನರೂ ಸಭೆಯಲ್ಲಿ ಭಾಗವಹಿಸಿ ಆಡಳಿತ ಯಂತ್ರ ಸರಿಪಡಿಸಲು ಕಾರಣರಾಗಬೇಕು ಎಂದು ಪ್ರದೀಪ್ ಕುಮಾರ್ ಹೇಳಿದರು.
ಅಶೋಕ್ ಎಡಮಲೆ, ದೀಕ್ಷಿತ್ ಜಯನಗರ, ಸುಳ್ಯಕೋಡಿ ಮಾಧವ ಗೌಡ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group