“ಮನೆಗೊಂದು ಇಂಗುಗುಂಡಿ” ಅಭಿಯಾನಕ್ಕೆ ಚಾಲನೆ : ಸುಳ್ಯನ್ಯೂಸ್.ಕಾಂ ನಿಂದ ಸಸಿ ಕೊಡುಗೆ

July 11, 2019
8:30 AM

ಸುಳ್ಯ: ಜಲಸಂರಕ್ಷಣೆಗಾಗಿ   ಮನೆಗೊಂದು  ಇಂಗು ಗುಂಡಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಸಲಾಯಿತು.

Advertisement

ಸುಳ್ಯದ ಸ್ನೇಹ ಶಾಲೆ ನೇತೃತ್ವದಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಸಣ್ಣ ಸಣ್ಣ ಇಂಗುಗುಂಡಿ ಹಾಗೂ ಮಕ್ಕಳಿಗೆ ನೀರಿಂಗಿಸುವಿಕೆಯ ಮಹತ್ವವನ್ನು ಸಾರುವ ಅಭಿಯಾನ ಉದ್ಘಾಟನೆಗೊಂಡಿತು. ಅಭಿಯಾನದ ಬಗ್ಗೆ ಮಾತನಾಡಿದ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ,  ತಮ್ಮ ತಮ್ಮ ಮನೆಗಳ ಹಿತ್ತಲಿನಲ್ಲಿ ಎರಡು ಅಡಿ ಉದ್ದ, ಅಗಲ ಮತ್ತು ಆಳದ ಇಂಗು ಗುಂಡಿಗಳನ್ನು ಮಾಡುವಂತೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 125 ವಿದ್ಯಾರ್ಥಿಗಳು ಇಂಗುಗುಂಡಿ ಮಾಡುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್. ಪಿ. ಮಾತಾಡಿ ಮಕ್ಕಳು ಇಂತಹ ಅಭಿಯಾನದಲ್ಲಿ ಪಾಲ್ಗೊಳ್ಳುವ ಮಹತ್ವವನ್ನು ಹೇಳಿದರು. ಶಾಲಾ ಅಭಿವೃದ್ಧಿ ಮಂಡಲಿ ಸದಸ್ಯ ಕೆ.ಆರ್. ಮಹಮ್ಮದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ  ನಳಿನಿ ಅವರು ನೀರಿಂಗಿಸುವಿಕೆಯ ಅಗತ್ಯವನ್ನು ಹೇಳಿದರು.

ಕಾರ್ಯಕ್ರಮದ ಬಳಿಕ ಸುಳ್ಯನ್ಯೂಸ್.ಕಾಂ ವತಿಯಿಂದ ಶಾಲೆಗೊಂದು ಹಣ್ಣಿನ ಗಿಡ ಎಂಬ ಉದ್ದೇಶದಿಂದ ಎರಡು ಹಣ್ಣಿನ ಗಿಡವನ್ನು  ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ವಿತರಿಸಿದರು.

 

Advertisement

 

ಗಾಂಧಿನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಜಲಾಮೃತ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಮಕ್ಕಳ ಮುಖದಲ್ಲಿನ ಮಂದಹಾಸ, ಇಂಗುಗುಂಡಿ ಮಾಡುವತ್ತ ಮಾಡಿದ ಮನಸ್ಸಿನ ಪ್ರತೀಕವೆಂಬಂತೆ ತೋರುತ್ತಿತ್ತು.  ಸರಕಾರಿ ಶಾಲಾ ಮಕ್ಕಳು ಈ ಕಾರ್ಯದಲ್ಲಿ ಸಹಕರಿಸುವ ಭರವಸೆಯಿದೆ. – ಚಂದ್ರಶೇಖರ ದಾಮ್ಲೆ 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ
June 5, 2025
7:47 AM
by: The Rural Mirror ಸುದ್ದಿಜಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group