ಮಳೆ ಹಾನಿ : ದ.ಕ. ಜಿಲ್ಲೆಯ ರಸ್ತೆ ದುರಸ್ತಿಗೆ 27.14 ಕೋಟಿ ರೂ. ಅನುದಾನ

October 4, 2019
7:18 PM

ಭಾರೀ ಮಳೆಯಿಂದ ತಾಲೂಕಿನ ವಿವಿಧ ರಸ್ತೆಗಳು ಹಾನಿಯಾಗಿದೆ. ಈಗಾಗಲೇ ಜಿಲ್ಲೆಗೆ ಮಳೆಹಾನಿ ಅನುದಾನ ಲಭ್ಯವಾಗಿದೆ. ಇದರಲ್ಲಿ  ತಾಲೂಕಿನ ರಸ್ತೆಗಳ ಅಭಿವೃದ್ಧಿಗೂ ಆದ್ಯತೆ ಇರಲಿ ಎಂಬ ಆಶಯದೊಂದಿಗೆ……


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯ ಹೆದ್ದಾರಿ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಂಡಿದೆ.  ಹಾನಿಗೊಳಗಾದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ ಮತ್ತು ಸೇತುವೆ ದುರಸ್ತಿ ತುರ್ತಾಗಿ ಕೈಗೊಂಡು ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದು, ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆಗೆ ಒಟ್ಟು 27.14 ಕೋಟಿ ರೂ. ಅನುಮೋದನೆ ದೊರಕಿರುತ್ತದೆ.

ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆ ಮಂಗಳೂರು ವಿಭಾಗದ ಅಧೀನದಲ್ಲಿರುವ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಗಂಡಿ ಹಾಗೂ ಸುಳ್ಯ ಉಪವಿಭಾಗಗಳಿಗೆ ನೀಡಿರುವ ಅನುದಾನವನ್ನು ಪರಿಮಾಣಕ್ಕೆ ಅನುಗುಣವಾಗಿ ಮರುಹಂಚಿಕೆ ಮಾಡಿ ಕ್ರಿಯಾಯೋಜನೆ ತಯಾರಿಸಲಾಗಿರುತ್ತದೆ.  ಲೋಕೋಪಯೋಗಿ ಮಂಗಳೂರು ವಿಭಾಗಕ್ಕೆ ರಾಜ್ಯಹೆದ್ದಾರಿ ರಸ್ತೆ ಹಾಗೂ ಸೇತುವೆ 71 ಕಾಮಗಾರಿಗಳಿಗೆ ರೂ 10.32 ಕೋಟಿ ಮತ್ತು ಜಿಲ್ಲಾ ಮುಖ್ಯ ರಸ್ತೆ ಹಾಗೂ ಸೇತುವೆ 127  ಕಾಮಗಾರಿಗಳಿಗೆ ರೂ 16.83 ಕೋಟಿಯಂತೆ ಒಟ್ಟು 198 ಕಾಮಗಾರಿಗಳಿಗೆ 27.14 ಕೋಟಿ ಕ್ರಿಯಾಯೋಜನೆ ತಯಾರಿಸಲಾಗಿದ್ದು ಈಗಾಗಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ರಗತಿಯಲ್ಲಿರುತ್ತದೆ ಎಂದು ಮಂಗಳೂರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror