ಮಳೆ ಹೇಳಿತು…..!

July 11, 2019
1:00 PM

( ಮಳೆಯ ಬಗ್ಗೆ ಮಲೆಯಾಳದಲ್ಲಿ  ಬರೆದಿರುವ ಬರಹವೊಂದರ ಅನುವಾದ ಹೀಗಿದೆ )

 

ಇಂದು ಮಳೆ ನುಡಿಯಿತು….
ಅಂದು ನಾನು ಹಲವು ಬಾರಿ ಹೇಳಿದ್ದೆ, ಬೇಡ.. ಬೇಡ ಅಂತ… ಆದರೆ ನೀವು ನನ್ನ ದಾರಿ ಅಡ್ಡಗಟ್ಟಿದಿರಿ.
ಹೊಳೆಯೂ ಹೇಳಿತು…
ಅಂದು ನಾನು ತುಂಬಾ ಉಕ್ಕಿ ಹರಿದಿದ್ದೆ…
ಆದರೆ ನೀವು ನನ್ನ ಹೃದಯ ಹಿಸುಕಿ,ನನ್ನ ದಡವನ್ನು ಆಕ್ರಮಿಸಿದಿರಿ
ಭೂಮಿಯೂ ಹೇಳಿತು…
ಅಂದು ನಾನು ಸಾಕಷ್ಟು ಜಲ ಹೀರಿದ್ದೆ…
ಆದರೆ ಇಂದು ನೀವು ನನ್ನ ಬಾಯಿಗೆ ಕಾಂಕ್ರೀಟ್ ತುಂಬಿದಿರಿ.. ನಾನು ನೀರು ಸಂಗ್ರಹಿಸುತ್ತಿದ್ದ ಹೊಲ – ಜಲಾಶಯಕ್ಕೆ ಮಣ್ಣು ತುಂಬಿದಿರಿ..
ಬೆಟ್ಟವೂ ನುಡಿಯಿತು…
ಅಂದು ನಾನು ಭೀಕರ ಗಾಳಿ ಮಳೆಗೆ ಅಲುಗಾಡದೆ ಗಟ್ಟಿ ನಿಂತಿದ್ದೆ… ಆದರೆ ನೀವು ನನ್ನ ಕಾಲು ತುಂಡರಿಸಿದಿರಿ… ನನಗೆ ಕಾಲು ಗಟ್ಟಿ ಊರಲಾಗದೆ, ಭೂಕುಸಿದು ಬೀಳುತ್ತಿದ್ದೇನೆ…
ಈಗ ಮಳೆ ಕೇಳುತ್ತಿದೆ…
ನೀವು ಮಣ್ಣು ತುಂಬಿದ ನದಿ..ತೋಡುಗಳನ್ನು ನನಗೆ ತೆರೆದು ಬಿಡುತ್ತೀರಾ..? ನಾನು ನನ್ನ ಪಾಡಿಗೆ ಹೋಗುವೆ…
ಹೊಳೆ ಕೇಳುತ್ತಿದೆ…..
ನೀವು ನನ್ನಿಂದ ಆಕ್ರಮಿಸಿದ ದಡವನ್ನು ವಾಪಸ್ಸು ಕೊಡುವಿರಾ..? ನಾನು ನನ್ನ ಪಾಡಿಗೆ ಹೋಗುವೆ…
ಭೂಮಿ ಕೇಳುತ್ತಿದೆ…
ನಾನು ನೀರು ಸಂಗ್ರಹಿಸುತ್ತಿದ್ದ ಹೊಲ,ಜಲಾಶಯ ವಾಪಸ್ಸು ಕೊಡುವಿರಾ ? ಅಲ್ಲೇ ಹಾಯಾಗಿರುವೆ..
ಬೆಟ್ಟವೂ ಕೇಳುತ್ತಿದೆ…
ಇನ್ನಾದರೂ ನನ್ನ ಕಾಲು ಕಡಿಯುವುದನ್ನು ನಿಲ್ಲಿಸುವಿರಾ..? ನಾನು ಒಂಟಿ ಕಾಲಲ್ಲಾದರೂ ಗಟ್ಟಿ ಕಾಲೂರಲು ಪ್ರಯತ್ನಿಸುವೆ…
ನೆನಪಿರಲಿ….
ನಾವು ಮನುಷ್ಯರು ಪ್ರಕೃತಿಯ ಕಾವಲುಗಾರರು ಮಾತ್ರ… ಒಡೆಯರಲ್ಲ..!
ಮರೆತರೆ…
ಪ್ರಕೃತಿಯೇ … ಅದು ತಾನು ಏನೆಂಬುದನ್ನು ನಮಗೆ ಕಲಿಸಿ ಕೊಡುತ್ತದೆ…
ಈ ಮಳೆಗಾಲ ಅದಕ್ಕೊಂದು ಉದಾಹರಣೆ ಮಾತ್ರ

 

(ಸಂಗ್ರಹಾನುವಾದ…ಕೆ.ಪಿ.ನಾಭ ಐ ಎಲ್ )

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೈಸೂರಿನಲ್ಲಿ ಸೆ. 22 ರಿಂದ ಅಕ್ಟೋಬರ್ 1 ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ
September 20, 2025
7:08 AM
by: The Rural Mirror ಸುದ್ದಿಜಾಲ
ಮಾಗುವುದು ಸಾಧನೆ ಬೀಗುವುದು ಸುಮ್ಮನೆ
September 16, 2025
7:14 AM
by: ದ ರೂರಲ್ ಮಿರರ್.ಕಾಂ
ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
August 8, 2025
6:37 AM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group