“ಮಹಾ” ಮುಖ್ಯಮಂತ್ರಿಯಾಗಿ ಉದ್ದವ್ ಠಾಕ್ರೆ ನ.28 ರಂದೇ ಅಧಿಕಾರ ಸ್ವೀಕಾರ

November 27, 2019
9:33 AM

ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಎರಡನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೆ ಡಿಸೆಂಬರ್ 1 ರ ಬದಲಾಗಿ ನ.28 ರಂದೇ ಪ್ರಮಾಣವಚನಕ್ಕೆ ದಿನ ನಿಗದಿಯಾಗಿದೆ.ಶಿವಾಜಿ ಪಾರ್ಕ್ ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಶಿವಸೇನಾ ಮುಖ್ಯಸ್ಥ ಹಾಗೂ  ‘ಮಹಾ ವಿಕಾಸ ಅಘಾದಿ’ ಮೈತ್ರಿಕೂಟದ ನಾಯಕ ಉದ್ಧವ್ ಠಾಕ್ರೆ ಅವರು ಮಂಗಳವಾರ ರಾತ್ರಿ ಸರ್ಕಾರ ರಚನೆಯ ಹಕ್ಕು ಮಂಡಿಸಿ ಡಿ.1 ರಂದು ಪ್ರಮಾಣವಚನ ಎಂದು ದಿನ ನಿಗದಿ ಮಾಡಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಗುರುವಾರವೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದರು. ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಗಳ ಶಾಸಕರ ಸಭೆಯಲ್ಲಿ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ ಅಘಾದಿ ಮೈತ್ರಿಕೂಟದ ನಾಯಕನಾಗಿ ಆಯ್ಕೆ ಮಾಡಿದ ಬಳಿಕ ಮುಂದಿನ ಬೆಳವಣಿಗಗಳು ನಡೆದವು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ
July 7, 2026
12:25 PM
by: ಸಾಯಿಶೇಖರ್ ಕರಿಕಳ
ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ
ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror