ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಪಕ್ಷಗಳ ತುರ್ತು ಸಭೆ

November 12, 2019
7:09 PM

ನವದೆಹಲಿ:ಮಹಾರಾಷ್ಟ್ರದಲ್ಲಿ  ರಾಜಕೀಯ ಬಿಕ್ಕಟ್ಟು ಪರಿಗಣಿಸಿ ರಾಜ್ಯಪಾಲರ ವರದಿಯನ್ನು ಪರಿಶೀಲಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್  ಅನುಮೋದನೆ ನೀಡಿದ್ದು, ಇದರಿಂದ ಮಹಾರಾಷ್ಟ್ರದಲ್ಲಿ ಅಧಿಕೃತವಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ.

Advertisement
Advertisement

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿರುವಾಗಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದ್ದು ರಾಜ್ಯದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟಗಳು ಸರಕಾರ ರಚನೆಗೆ ಮುಂದಾಗಿಲ್ಲ. ಈ ಕಾರಣಕ್ಕಾಗಿ ರಾಷ್ಟ್ರಪತಿಗಳ ಆಳ್ವಿಕೆ ಜಾರಿ ಮಾಡುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಂಗಳವಾರ ಮಧ್ಯಾಹ್ನ ಶಿಫಾರಸು ಮಾಡಿದ್ದರು.

ಸರಕಾರ ರಚನೆಗೆ ಹಕ್ಕು ಮಂಡಿಸುವಂತೆ ಮೂರನೇ ಅತಿ ದೊಡ್ಡ ಪಕ್ಷವಾದ ಎನ್‌ಸಿಪಿಗೆ ರಾಜ್ಯಪಾಲರು ಸೋಮವಾರ ಆಹ್ವಾನ ನೀಡಿದ್ದರು. ಇದರ ಗಡುವು ಮಂಗಳವಾರ ರಾತ್ರಿ 8.30ಕ್ಕೆ ಮುಗಿಯುತ್ತಿತ್ತು. ಆದರೆ ಈ ಅವಧಿ ಮುಗಿಯುವ ಮೊದಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವುದು  ಚರ್ಚೆಗೆ ಗ್ರಾಸವಾಗಿದೆ.

ಇದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಶಿವಸೇವಾ ಹೇಳಿದೆ.

ಈ ನಡುವೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿ ಶಿವಸೇವಾ ಹಾಗೂ ಎನ್ ಸಿ ಪಿ ಮುಖ್ಯಮಂತ್ರಿ ಸ್ಥಾನವನ್ನು ಸಮಾನ ಅವಧಿಗೆ ಹಂಚಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೀಗ ಎನ್ ಸಿ ಪಿ ಹಾಗೂ ಕಾಂಗ್ರೆಸ್ ಜಂಟಿ ಸಭೆ ನಡೆಸಿದೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |
July 22, 2025
8:15 AM
by: The Rural Mirror ಸುದ್ದಿಜಾಲ
ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group