ಮಾಧ್ಯಮದವರಿಗೆ ತಡೆ: ಬಿಜೆಪಿ ಕಚೇರಿ ಸುದ್ದಿಗೋಷ್ಠಿಗೆ ಬಹಿಷ್ಕಾರ- ಬಳಿಕ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕರು

August 21, 2019
3:09 PM

ಸುಳ್ಯ:ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಟಿಗೆ ಬರಲು ಹೇಳಿ ಹೀಗೆ ಮಾಡುವುದಾ ?.ಏನದು ಘಟನೆ ? ಇಲ್ಲಿದೆ…

Advertisement
Advertisement
Advertisement
Advertisement

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೆ ಅಸಮಾಧಾನ ಉಂಟಾಗಿರುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದಂತೆ ಪತ್ರಿಕಾಗೋಷ್ಠಿಗೆಂದು ಆಗಮಿಸಿದ ಮಾಧ್ಯಮಪ್ರತಿನಿಧಿಗಳಿಗೆ ತಡೆ ಮಾಡಿದ ಕಾರಣ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಪತ್ರಕರ್ತರು ಬಹಿಷ್ಕರಿಸಿದ ಘಟನೆ ಬುಧವಾರ ನಡೆಯಿತು.ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿದರು.

Advertisement

ಅಂಗಾರರಿಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ತೀರ್ಮಾನಗಳ ಕುರಿತು ವಿವರಿಸಲು ಬುಧವಾರ 12 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಗೆಂದು ಕೆಲವು ಪತ್ರಕರ್ತರು ಸ್ವಲ್ಪ ಮೊದಲೇ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿತ್ತು. ಕಚೇರಿಗೆ ಆಗಮಿಸುತ್ತಿದ್ದಂತೆ ಪತ್ರಕರ್ತರನ್ನು ಅಲ್ಲಿದ್ದ ಕೆಲವು ಕಾರ್ಯಕರ್ತರು ತಡೆದರು. ಕೆಲವು ಮಾಧ್ಯಮದವರು ಆಗಮಿಸಿದ ಸಂದರ್ಭದಲ್ಲಿ ಸಭೆಗೆ ಬಾರದಂತೆ ನಾಯಕರು ಧ್ವನಿವರ್ಧಕದ ಮೂಲಕ ಹೇಳಿದ ಪ್ರಸಂಗವೂ ನಡೆಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ಪತ್ರಕರ್ತರು ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವುದಿಲ್ಲ ಎಂದು ತೆರಳಿದರು.

ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಘಟನೆಗೆ ವಿಷಾದ ವ್ಯಕ್ತಪಡಿಸಿ ಬಳಿಕ ಸುದ್ದಿಗೋಷ್ಠಿ ನಡೆಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror