ಮಾಧ್ಯಮದವರಿಗೆ ತಡೆ: ಬಿಜೆಪಿ ಕಚೇರಿ ಸುದ್ದಿಗೋಷ್ಠಿಗೆ ಬಹಿಷ್ಕಾರ- ಬಳಿಕ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕರು

August 21, 2019
3:09 PM

ಸುಳ್ಯ:ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಟಿಗೆ ಬರಲು ಹೇಳಿ ಹೀಗೆ ಮಾಡುವುದಾ ?.ಏನದು ಘಟನೆ ? ಇಲ್ಲಿದೆ…

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೆ ಅಸಮಾಧಾನ ಉಂಟಾಗಿರುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದಂತೆ ಪತ್ರಿಕಾಗೋಷ್ಠಿಗೆಂದು ಆಗಮಿಸಿದ ಮಾಧ್ಯಮಪ್ರತಿನಿಧಿಗಳಿಗೆ ತಡೆ ಮಾಡಿದ ಕಾರಣ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಪತ್ರಕರ್ತರು ಬಹಿಷ್ಕರಿಸಿದ ಘಟನೆ ಬುಧವಾರ ನಡೆಯಿತು.ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿದರು.

ಅಂಗಾರರಿಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ತೀರ್ಮಾನಗಳ ಕುರಿತು ವಿವರಿಸಲು ಬುಧವಾರ 12 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಗೆಂದು ಕೆಲವು ಪತ್ರಕರ್ತರು ಸ್ವಲ್ಪ ಮೊದಲೇ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿತ್ತು. ಕಚೇರಿಗೆ ಆಗಮಿಸುತ್ತಿದ್ದಂತೆ ಪತ್ರಕರ್ತರನ್ನು ಅಲ್ಲಿದ್ದ ಕೆಲವು ಕಾರ್ಯಕರ್ತರು ತಡೆದರು. ಕೆಲವು ಮಾಧ್ಯಮದವರು ಆಗಮಿಸಿದ ಸಂದರ್ಭದಲ್ಲಿ ಸಭೆಗೆ ಬಾರದಂತೆ ನಾಯಕರು ಧ್ವನಿವರ್ಧಕದ ಮೂಲಕ ಹೇಳಿದ ಪ್ರಸಂಗವೂ ನಡೆಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ಪತ್ರಕರ್ತರು ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವುದಿಲ್ಲ ಎಂದು ತೆರಳಿದರು.

ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಘಟನೆಗೆ ವಿಷಾದ ವ್ಯಕ್ತಪಡಿಸಿ ಬಳಿಕ ಸುದ್ದಿಗೋಷ್ಠಿ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror