ಮಾಧ್ಯಮದವರಿಗೆ ತಡೆ: ಬಿಜೆಪಿ ಕಚೇರಿ ಸುದ್ದಿಗೋಷ್ಠಿಗೆ ಬಹಿಷ್ಕಾರ- ಬಳಿಕ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕರು

August 21, 2019
3:09 PM

ಸುಳ್ಯ:ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಟಿಗೆ ಬರಲು ಹೇಳಿ ಹೀಗೆ ಮಾಡುವುದಾ ?.ಏನದು ಘಟನೆ ? ಇಲ್ಲಿದೆ…

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೆ ಅಸಮಾಧಾನ ಉಂಟಾಗಿರುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದಂತೆ ಪತ್ರಿಕಾಗೋಷ್ಠಿಗೆಂದು ಆಗಮಿಸಿದ ಮಾಧ್ಯಮಪ್ರತಿನಿಧಿಗಳಿಗೆ ತಡೆ ಮಾಡಿದ ಕಾರಣ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಪತ್ರಕರ್ತರು ಬಹಿಷ್ಕರಿಸಿದ ಘಟನೆ ಬುಧವಾರ ನಡೆಯಿತು.ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿದರು.

ಅಂಗಾರರಿಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ತೀರ್ಮಾನಗಳ ಕುರಿತು ವಿವರಿಸಲು ಬುಧವಾರ 12 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಗೆಂದು ಕೆಲವು ಪತ್ರಕರ್ತರು ಸ್ವಲ್ಪ ಮೊದಲೇ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿತ್ತು. ಕಚೇರಿಗೆ ಆಗಮಿಸುತ್ತಿದ್ದಂತೆ ಪತ್ರಕರ್ತರನ್ನು ಅಲ್ಲಿದ್ದ ಕೆಲವು ಕಾರ್ಯಕರ್ತರು ತಡೆದರು. ಕೆಲವು ಮಾಧ್ಯಮದವರು ಆಗಮಿಸಿದ ಸಂದರ್ಭದಲ್ಲಿ ಸಭೆಗೆ ಬಾರದಂತೆ ನಾಯಕರು ಧ್ವನಿವರ್ಧಕದ ಮೂಲಕ ಹೇಳಿದ ಪ್ರಸಂಗವೂ ನಡೆಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ಪತ್ರಕರ್ತರು ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವುದಿಲ್ಲ ಎಂದು ತೆರಳಿದರು.

ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಘಟನೆಗೆ ವಿಷಾದ ವ್ಯಕ್ತಪಡಿಸಿ ಬಳಿಕ ಸುದ್ದಿಗೋಷ್ಠಿ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror