ಮುಂದುವರಿದ ಕೊರೋನಾ ಅಬ್ಬರ | ರಾಜ್ಯದಲ್ಲಿ 4,120 ಮಂದಿಗೆ ಸೋಂಕು | ದ ಕ ಜಿಲ್ಲೆಯಲ್ಲಿ 285 ಮಂದಿಗೆ ಕೊರೋನಾ ಪಾಸಿಟಿವ್ |

July 19, 2020
8:36 PM

ಮಂಗಳೂರು/ಬೆಂಗಳೂರು: ಕೊರೋನಾ ಅಬ್ಬರ ಭಾನುವಾರವೂ ಮುಂದುವರಿದೆ. ಭಾನುವಾರ ರಾಜ್ಯದಲ್ಲಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 2156 ಪ್ರಕರಣಗಳು ವರದಿಯಾಗಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ285 ಮಂದಿಗೆ ಕೊರೋನಾ ಪಾಸಿಟಿವ್  ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ  4,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ. 1290 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 23,065 ಮಂದಿ ಗುಣಮುಖರಾಗಿದ್ದಾರೆ.  ಭಾನುವಾರ ಒಂದೇ ದಿನ  91 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.  104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಭಾನುವಾರ ಕೊರೋನಾಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಮಂಗಳೂರು ಮೂಲದ 53 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ 134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚುತ್ತಿದ್ದು ಭಾನುವಾರ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror