ಮುಂದುವರಿದ ಕೊರೋನಾ ಅಬ್ಬರ | ರಾಜ್ಯದಲ್ಲಿ 4,120 ಮಂದಿಗೆ ಸೋಂಕು | ದ ಕ ಜಿಲ್ಲೆಯಲ್ಲಿ 285 ಮಂದಿಗೆ ಕೊರೋನಾ ಪಾಸಿಟಿವ್ |

July 19, 2020
8:36 PM

ಮಂಗಳೂರು/ಬೆಂಗಳೂರು: ಕೊರೋನಾ ಅಬ್ಬರ ಭಾನುವಾರವೂ ಮುಂದುವರಿದೆ. ಭಾನುವಾರ ರಾಜ್ಯದಲ್ಲಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 2156 ಪ್ರಕರಣಗಳು ವರದಿಯಾಗಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ285 ಮಂದಿಗೆ ಕೊರೋನಾ ಪಾಸಿಟಿವ್  ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ  4,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ. 1290 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 23,065 ಮಂದಿ ಗುಣಮುಖರಾಗಿದ್ದಾರೆ.  ಭಾನುವಾರ ಒಂದೇ ದಿನ  91 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.  104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಭಾನುವಾರ ಕೊರೋನಾಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಮಂಗಳೂರು ಮೂಲದ 53 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ 134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚುತ್ತಿದ್ದು ಭಾನುವಾರ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ
“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror