ಮುಗಿದ ಉಪಸಮರ: ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು?

December 5, 2019
9:57 PM

ಬೆಂಗಳೂರು: ಕರ್ನಾಟಕದ ಉಪಸಮರ ಮುಗಿದಿದ್ದು ಸಿ ವೋಟರ್ ಸಮೀಕ್ಷೆ ಬಿಜೆಪಿಗೆ ಮುನ್ನಡೆ ನೀಡಿದೆ. ಬಿಜೆಪಿ 9 ರಿಂದ 12 ಸ್ಥಾನದಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದ್ದರೆ ಕಾಂಗ್ರೆಸ್ ಗೆ 3 ರಿಂದ 6 ಸ್ಥಾನ ದೊರೆಯಲಿದೆ ಎಂದು ಹೇಳಿದೆ.

ಜೆಡಿಎಸ್ 1 ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ, ಪಕ್ಷೇತರ ಶೂನ್ಯ ಫಲಿತಾಂಶ ಬರಲಿದೆ ಎಂದು ಸಿ -ವೋಟರ್ ಸಮೀಕ್ಷೆ ಹೇಳಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜಡಿಎಸ್ ಪಕ್ಷಗಳು ಆಂತರಿಕವಾಗಿ ತಮ್ಮ ತಮ್ಮ ಸಮೀಕ್ಷೆ ಮಾಡಿವೆ. ಆಯಾ ಪಕ್ಷಗಳು ತಮ್ಮ ಕಾರ್ಯಕರ್ತರ ಮಾಹಿತಿ ಆಧಾರದ ಮೇಲೆ ಇಂತಿಷ್ಟು ಸ್ಥಾನ ಬರುವುದು ಎಂಬ ಲೆಕ್ಕಾಚಾರ ಮಾಡಿಕೊಂಡಿವೆ.

15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಡಿ.5ರಂದು ಮುಗಿದಿದೆ. ಡಿಸೆಂಬರ್ 9 ರಂದು ಫಲಿತಾಂಶ ಹೊರಬೀಳಲಿದ್ದು ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಅಳಿವು-ಉಳಿವು ಆ ಫಲಿತಾಂಶದ ಮೇಲೆ ನಿಂತಿದೆ.

ಉಪಚುನಾವಣೆ ನಡೆದಿರುವ ಕ್ಷೇತ್ರಗಳು :
1.ಗೋಕಾಕ್, 2.ಅಥಣಿ, 3.ಕಾಗವಾಡ (ಬೆಳಗಾವಿ), 4. ರಾಣೇಬೆನ್ನೂರು, 5. ಹಿರೇಕೆರೂರು (ಹಾವೇರಿ), 6. ಕೆ.ಆರ್.ಪುರಂ, 7.ಯಶವಂತಪುರ, 8. ಶಿವಾಜಿನಗರ, 9. ಮಾಹಾಲಕ್ಷ್ಮೀ ಲೇಔಟ್ (ಬೆಂಗಳೂರು), 10.ಯಲ್ಲಾಪುರ (ಉತ್ತರ ಕನ್ನಡ), 11. ಕೆ.ಆರ್.ಪೇಟೆ (ಮಂಡ್ಯ), 12. ಹುಣಸೂರು (ಮೈಸೂರು), 13. ಚಿಕ್ಕಬಳ್ಳಾಪುರ, 14. ಹೊಸಕೋಟೆ (ಬೆಂಗಳೂರು ಗ್ರಾಮಾಂತರ) ಹಾಗೂ 15. ವಿಜಯನಗರ (ಬಳ್ಳಾರಿ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror