ಮುಗಿದ ಉಪಸಮರ: ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು?

December 5, 2019
9:57 PM

ಬೆಂಗಳೂರು: ಕರ್ನಾಟಕದ ಉಪಸಮರ ಮುಗಿದಿದ್ದು ಸಿ ವೋಟರ್ ಸಮೀಕ್ಷೆ ಬಿಜೆಪಿಗೆ ಮುನ್ನಡೆ ನೀಡಿದೆ. ಬಿಜೆಪಿ 9 ರಿಂದ 12 ಸ್ಥಾನದಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದ್ದರೆ ಕಾಂಗ್ರೆಸ್ ಗೆ 3 ರಿಂದ 6 ಸ್ಥಾನ ದೊರೆಯಲಿದೆ ಎಂದು ಹೇಳಿದೆ.

ಜೆಡಿಎಸ್ 1 ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ, ಪಕ್ಷೇತರ ಶೂನ್ಯ ಫಲಿತಾಂಶ ಬರಲಿದೆ ಎಂದು ಸಿ -ವೋಟರ್ ಸಮೀಕ್ಷೆ ಹೇಳಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜಡಿಎಸ್ ಪಕ್ಷಗಳು ಆಂತರಿಕವಾಗಿ ತಮ್ಮ ತಮ್ಮ ಸಮೀಕ್ಷೆ ಮಾಡಿವೆ. ಆಯಾ ಪಕ್ಷಗಳು ತಮ್ಮ ಕಾರ್ಯಕರ್ತರ ಮಾಹಿತಿ ಆಧಾರದ ಮೇಲೆ ಇಂತಿಷ್ಟು ಸ್ಥಾನ ಬರುವುದು ಎಂಬ ಲೆಕ್ಕಾಚಾರ ಮಾಡಿಕೊಂಡಿವೆ.

15 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಡಿ.5ರಂದು ಮುಗಿದಿದೆ. ಡಿಸೆಂಬರ್ 9 ರಂದು ಫಲಿತಾಂಶ ಹೊರಬೀಳಲಿದ್ದು ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಅಳಿವು-ಉಳಿವು ಆ ಫಲಿತಾಂಶದ ಮೇಲೆ ನಿಂತಿದೆ.

ಉಪಚುನಾವಣೆ ನಡೆದಿರುವ ಕ್ಷೇತ್ರಗಳು :
1.ಗೋಕಾಕ್, 2.ಅಥಣಿ, 3.ಕಾಗವಾಡ (ಬೆಳಗಾವಿ), 4. ರಾಣೇಬೆನ್ನೂರು, 5. ಹಿರೇಕೆರೂರು (ಹಾವೇರಿ), 6. ಕೆ.ಆರ್.ಪುರಂ, 7.ಯಶವಂತಪುರ, 8. ಶಿವಾಜಿನಗರ, 9. ಮಾಹಾಲಕ್ಷ್ಮೀ ಲೇಔಟ್ (ಬೆಂಗಳೂರು), 10.ಯಲ್ಲಾಪುರ (ಉತ್ತರ ಕನ್ನಡ), 11. ಕೆ.ಆರ್.ಪೇಟೆ (ಮಂಡ್ಯ), 12. ಹುಣಸೂರು (ಮೈಸೂರು), 13. ಚಿಕ್ಕಬಳ್ಳಾಪುರ, 14. ಹೊಸಕೋಟೆ (ಬೆಂಗಳೂರು ಗ್ರಾಮಾಂತರ) ಹಾಗೂ 15. ವಿಜಯನಗರ (ಬಳ್ಳಾರಿ)

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror