ಮೇ.21: ವೇದ ಯೋಗ ಕಲಾ ಶಿಬಿರದ ಸಮಾಪನ ಮತ್ತು ಕೇಶವಸ್ಮೃತಿ ಪ್ರಶಸ್ತಿ ಪ್ರದಾನ

May 15, 2019
8:35 PM

ಸುಳ್ಯ: ಸುಳ್ಯದ ಶ್ರೀಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ವೇದ ಯೋಗ ಕಲಾ ಶಿಬಿರ ಮೇ.21ರಂದು ಸಮಾಪಗೊಳ್ಳಲಿದೆ ಎಂದು ಶಿಬಿರದ ಸಂಚಾಲಕ ಎಂ.ಎಸ್.ನಾಗರಾಜ ರಾವ್ ಹೇಳಿದ್ದಾರೆ.

Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಲಿದ್ದಾರೆ. ರಾಜಗೋಪಾಲ ಭಟ್ ಉಂಡೆಮನೆ ಸಭಾಧ್ಯಕ್ಷತೆ ವಹಿಸಲಿದ್ದು, ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಶ್ರೀ ಕೇಶವಸ್ಮೃ ತಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಶಿಬಿರದ ಸಂಚಾಲಕ ಎಂ.ಎಸ್. ನಾಗರಾಜ ರಾವ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರುವರು.
ಪ್ರತಿವರ್ಷ ಪ್ರತಿಷ್ಠಾನದ ವತಿಯಿಂದ ವೇದ, ಯೋಗ ಮತ್ತು ಕಲಾ ಕ್ಷೇತ್ರದಿಂದ ಆರಿಸಿದ ಮೂವರು ಸಾಧಕರಿಗೆ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದ್ದು ಈ ಬಾರಿ ವೈದಿಕ ಕ್ಷೇತ್ರದಿಂದ ಪುರುಷೋತ್ತಮ ಭಟ್ ದೇರ್ಕಜೆ, ಯೋಗ ಕ್ಷೇತ್ರದಿಂದ ಪ್ರಕಾಶ್ ಮೂಡಿತ್ತಾಯ, ಕಲಾ ಕ್ಷೇತ್ರದಿಂದ ಸ್ಯಾಕ್ಸೋಫೋನ್ ವಾದಕ ಬಾಲಚಂದ್ರ ಪೆರಾಜೆ ಇವರನ್ನು ಶ್ರೀಕೇಶವ ಸ್ಮೃತಿ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಸುದರ್ಶನ ಭಟ್, ಅಭಿರಾಮ ಶರ್ಮಾ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror