ಮೇ.6 ರಿಂದ ರಮ್ಜಾನ್ ಉಪವಾಸ ಆರಂಭ

May 5, 2019
8:11 PM

ಮಂಗಳೂರು: ರಮ್ಜಾನ್ ತಿಂಗಳ ಚಂದ್ರ ದರ್ಶನ ಭಾನುವಾರ ಆಗಿರುವುದರಿಂದ ಮೇ 6 ರಿಂದ ಮುಸ್ಲಿಮರು ಒಂದು ತಿಂಗಳ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯರ್ ಘೋಷಿಸಿದ್ದಾರೆ.
ಸಾಮಾಜಿಕ ಸಾಮರಸ್ಯ ಗಟ್ಟಿಗೊಳಿಸಲು ಉಪವಾಸದಿಂದ ಸಾಧ್ಯವಾಗಲಿ. ರಮ್ಜಾನ್ ಎಂಬುದು ಹಸಿವು, ದಾಹ, ಭಾವನೆಗಳನ್ನು ಅರಿತುಕೊಳ್ಳುವ ತಿಂಗಳಾಗಿದ್ದು, ಮಾನವ ಸೌಹಾರ್ದತೆ ಮತ್ತು ಧರ್ಮಸಹಿಷ್ಣುತೆಗೆ ಈ ತಿಂಗಳು ಒತ್ತು ನೀಡುತ್ತದೆ. ಈ ತಿಂಗಳಲ್ಲಿ ಉಪವಾಸಿಯಾಗುವ ಮೂಲಕ ಮುಸ್ಲಿಮರು ಸ್ವಧರ್ಮವನ್ನು ಅರಿತುಕೊಳ್ಳಲು ಮತ್ತು ಇತರ ಧರ್ಮೀಯರೊಂದಿಗೆ ಸೌಹಾರ್ದ ಸಂಬಂಧ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ರಂಜಾನ್ ಸ್ವಶುದ್ಧೀಕರಣದ ತಿಂಗಳು. ನೈತಿಕವಾಗಿ ಮತ್ತು ಮಾನಸಿಕವಾಗಿ ಶುದ್ಧೀಕರಣಗೊಳ್ಳುವ ತಿಂಗಳಾಗಿ ಮುಸ್ಲಿಮರು ಈ ತಿಂಗಳನ್ನು ಸ್ವೀಕರಿಸಲಿ. ನಾಡಿನ ಸಮಸ್ತರಿಗೆ ರಂಜಾನ್ ಶುಭಾಶಯಗಳು ಎಂದು ಖಾಝಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್
ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!
May 2, 2026
10:47 AM
by: ಮಿರರ್‌ ಡೆಸ್ಕ್
ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು
May 2, 2026
10:37 AM
by: ಮಿರರ್‌ ಡೆಸ್ಕ್
ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ
May 2, 2026
10:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror