ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡಿರುವ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಮತ್ತು ಅವರ ಚಾಲಕನಿಗೆ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಸುಳ್ಯದ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಯ ಪ್ರಮುಖರು ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಕ್ಷೇಮ ವಿಚಾರಿಸಿದರು. ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗಿದ್ದು ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದಾಗ ರಾಮದಾಸ್ ಅವರ ಕಾರು ಇಂದು ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪಸ್ವಲ್ಪ ಗಾಯಗೊಂಡಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel