ಮೊಣ್ಣಂಗೇರಿಯಲ್ಲಿ ಬಾಯ್ದೆರೆದು ನಿಂತಿದೆ ಬಂಡೆ ಕಲ್ಲುಗಳು…!

May 15, 2019
9:00 AM

ಸಂಪಾಜೆ : ಮೊಣ್ಣಂಗೇರಿ ಪ್ರದೇಶದಲ್ಲಿ ಬೃಹತ್ ಗಾತ್ರದ  ಬಂಡೆಕಲ್ಲುಗಳು ಬಾಯ್ದೆರೆದು ನಿಂತಿದೆ. ಒಂದೆರಡು ಮಳೆಗೆ ಕುಸಿಯುವ ಭೀತಿ ಇದೆ. ಆ ಪ್ರದೇಶದಲ್ಲಿ ಈಗ ನಡೆಯುವುದೇ ಭಯ…!.

Advertisement
Advertisement

ಕಳೆದ 3 ದಿನಗಳಲ್ಲಿ ಕಳೆದ ಬಾರಿ ಮೊಣ್ಣಂಗೇರಿ, ಜೋಡುಪಾಲದ  ಜಲಪ್ರಳಯದ ನೆನಪುಗಳು ಹಾಗೂ ಇಂದಿನವರೆಗಿನ ಸ್ಥಿತಿಯ ದರ್ಶನವಾಗಿದೆ. ಮನೆಗಳೇ ಇಲ್ಲ, ಕೃಷಿ ನಾಶ, ಮುಚ್ಚಿದ ಶಾಲೆ ಸೇರಿದಂತೆ ಅಲ್ಲಿನ ಜನರ ಇಂದಿನ ಬದುಕು ದರ್ಶನವಾಗಿದೆ. ಈಗ ಮುಂದಿನ ಸ್ಥಿತಿಯ ಬಗ್ಗೆ ಯೋಚಿಸಿದರೆ ಭಯವಾಗುತ್ತಿದೆ. ಆ ಜನರಿಗೆ ನಿತ್ಯವೂ ಭಯವಾದರೆ ಮೊಣ್ಣಂಗೇರಿಯ ಆ ರಸ್ತೆಯಲ್ಲಿ ಓಡಾಡಿದರೆ ಎದೆ ಢವ ಢವ ಎನ್ನುತ್ತದೆ. ಆ ಬಂಡೆಗಳು ಈಗ ಬೀಳುತ್ತೋ ಮತ್ತೆ ಬೀಳುತ್ತೋ ಎನ್ನುವ ಸ್ಥಿತಿ ಇದೆ. ಈ ನಡುವೆ ಸಾಕಷ್ಟು ನೀರು ಹರಿಯುತ್ತಿದೆ ಅಲ್ಲಿ, ಆದರೆ ಆ ನೀರು ಅಲ್ಲಿನ ಜನರಿಗೆ ಈಗ ಉಪಯೋಗಕ್ಕೆ ಬರುತ್ತಿಲ್ಲ. ತೋಟ, ಮನೆ ಎತ್ತರದಲ್ಲಾದರೆ , ನೀರು ಕೆಳಭಾಗದಲ್ಲಿ ಹರಿಯುತ್ತಿದೆ. ಅದರ ದೃಶ್ಯ ಹೀಗಿದೆ….

 

 

ಕಳೆದ ಬಾರಿಯ ಪ್ರಳಯದ ನಂತರ ರಸ್ತೆ ದುರಸ್ತಿಯಾಗಿದೆ. ಇದು ಇಲ್ಲಿನ ಜನರಿಗೆ ಪ್ರಯೋಜನವಾಗಿದೆ. ಆದರೆ ಅದಕ್ಕಿಂತಲೂ ಭಯಾನಕ ಸ್ಥಿತಿ , ಈ ವರ್ಷ ಹೇಗೆ ಎಂದು ? ಒಂದೆರಡು ಮಳೆ ಬಿದ್ದರೆ ಭಯ ಶುರುವಾಗುತ್ತದೆ.  ಗುಡ್ಡದ ಮಣ್ಣು ಕುಸಿಯುತ್ತದೆ, ಕಲ್ಲುಗಳು ಬೀಳುತ್ತದೆ. ಎರಡು ಕಲ್ಲುಗಳು ಉಜ್ಜಿಕೊಂಡು ಬೀಳುವ ವೇಳೆ ದೊಡ್ಡದಾದ ಸದ್ದು ಕೇಳುತ್ತದೆ. ಮಳೆ ಬಂದಾಗ ನೀರು ಹೆಚ್ಚಾಗಿ ಬಂದು  ಸಡಿಲವಾಗಿರುವ ಮಣ್ಣು ಕೊರೆದು ಹೋದಾಗ ಕಲ್ಲುಗಳೂ ಆಧಾರ ಕಳೆದುಕೊಂಡು ಬೀಳುತ್ತವೆ. ಹೀಗಾಗಿ ಭಯ ಎಂದು ಹೇಳುತ್ತಾರೆ ಮೊಣ್ಣಂಗೇರಿಯ ಸತೀಶ್ ನಾಯ್ಕ್.

 

ಈ ಬಾರಿಯ ಮಳೆಗಾಲದ ಮುನ್ನ ಸೂಕ್ತ ಮುಂಜಾಗ್ರತಾ ಕ್ರಮವಾಗಬೇಕು. ಈಗಿರುವ ಜನರಿಗೆ ಸೂಕ್ತ ರಕ್ಷಣೆ ಬೇಕು ಎನ್ನುವುದು ಅಲ್ಲಿಗೆ ಹೋದ ಯಾರು ಬೇಕಾದರೂ ಹೇಳಬಹುದು. ಇದನ್ನು ಅಧಿಕಾರಿಗಳು ಈಗಲೇ ಗಮನಿಸಬೇಕು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು
February 12, 2026
6:40 AM
by: ಮಹೇಶ್ ಪುಚ್ಚಪ್ಪಾಡಿ
WHO ಅಡಿಕೆ ನೀತಿ ಚರ್ಚೆ | ಆರೋಗ್ಯ ರಕ್ಷಣೆಯೋ, ರೈತರಿಗೆ ಹೊಸ ಸವಾಲೋ?
February 8, 2026
12:47 PM
by: ದ ರೂರಲ್ ಮಿರರ್.ಕಾಂ
ಏಕ ಬೆಳೆಯ ಅಪಾಯಗಳು ಹಾಗೂ ರೈತರ ಅನಿಶ್ಚಿತ ಭವಿಷ್ಯ | ಭಾರತ ಮತ್ತು ಕರ್ನಾಟಕ ಈಗಲೇ ಕಲಿಯಬೇಕಾದ ಸತ್ಯಗಳು..!
January 20, 2026
7:00 AM
by: ಮಿರರ್‌ ಡೆಸ್ಕ್
ಮಣ್ಣಿನ ಆರೋಗ್ಯಕ್ಕೂ ಪ್ರಕೃತಿಯ ಸಮತೋಲನಕ್ಕೂ ಎಚ್ಚರಿಕೆಯ ಗಂಟೆ
January 19, 2026
7:41 AM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror