ಮೊದಲ ದಿನ “ಟೆಂಪಲ್ ರನ್” ಮಾಡಿದ ಸಂಸದ ನಳಿನ್

May 24, 2019
10:19 PM

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಳಿನ್ ಕುಮಾರ್ ಕಟೀಲು ಶುಕ್ರವಾರ  ವಿವಿಧ ದೇವಸ್ಥಾನ, ಮಠ ಹಾಗೂ ಧರ್ಮಾಧಿಕಾರಿಗಳನ್ನು ಭೇಟಿ ಮಾಡಿದರು.

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ನಳಿನ್ ಕುಮಾರ್ ಕಟೀಲು ಮೊದಲ ಬಾರಿಗೆ ಪುತ್ತೂರು  ಮಹಾಲಿಂಗೇಶ್ವರ ದೇವಸ್ಥಾನ, ವೆಂಕಟ್ರಮಣ ದೇವಸ್ಥಾನ , ಕೊಕ್ಕಡ ಸೌತಡ್ಕ ದೇವಸ್ಥಾನ, ಕೊಕ್ಕಡ ವೈದ್ಯನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಅದಾದ ಬಳಿಕ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಅದಾದ ಬಳಿಕ ಬೆಳ್ತಂಗಡಿಯಲ್ಲಿ  ನಡೆದ ಅಭಿನಂದನಾ ಸಭೆಯಲ್ಲಿ  ಭಾಗವಹಿಸಿದರು.

ಈ ನಡುವೆ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.

ಸಂಸದರ ಜೊತೆ  ಬಿಜೆಪಿ  ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror