ಯಕ್ಷಗಾನ ತಾಳಮದ್ದಲೆ ಸಮಾರೋಪ

September 18, 2019
5:30 PM

ಸುಳ್ಯ : ಸುಳ್ಯದಲ್ಲಿ ನಾಲ್ಕು ದಿನಗಳ ಕಾಲ ಪ್ರಸ್ತುತಪಡಿಸಿದ ತಾಳಮದ್ದಲೆ ಎಲ್ಲೂ ಔಚಿತ್ಯ ಮೀರದೆ, ಪಾತ್ರಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ಯಕ್ಷಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾರಸಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ವಿಶ್ರಾಂತ ಪ್ರಾಂಶುಪಾಲ ಪ್ರೊ| ಟಿ. ಶ್ರೀಕೃಷ್ಣ ಭಟ್ ಆಶಯ ವ್ಯಕ್ತಪಡಿಸಿದರು.

Advertisement
Advertisement

ಅವರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ನಡೆದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಇಲ್ಲಿನ ಶ್ರೀಕಲ್ಕುಡ ದೈವಸ್ಥಾನದ ಸಹಯೋಗದಲ್ಲಿ ಯುವಕ ಯಕ್ಷ ಕಲಾರಂಗದ ಶೇಖರ ಮಣಿಯಾಣಿ ಇವರ ಸಂಯೋಜನೆಯಲ್ಲಿ ಸೂರಾಲು ಶ್ರೀಮಹಾಲಿಂಗೇಶ್ವರ ಯಕ್ಷ ಬಳಗದವರಿಂದ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.
ಸೂರಾಲು ಯಕ್ಷ ಬಳಗದ ಸಂಚಾಲಕ ಡಾ| ರವಿಕುಮಾರ್ ಸೂರಾಲು ಅವರನ್ನು ಸನ್ಮಾನಿಸಲಾಯಿತು.ಯಕ್ಷ ವಾಗ್ಮಿ ಎಂ.ಆರ್.ವಾಸುದೇವ ಸಾಮಗ ಅವರು ಅಭಿನಂದನಾ ಭಾಷಣ ಮಾಡಿ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಡಾ| ರವಿಕುಮಾರ್ ಅವರಿಗೆ ಕಲೆ ಸಿದ್ಧಿಸಿದೆ. ರಂಗಸ್ಥಳದ ಶಿಸ್ತನ್ನು ಕಾಪಾಡುವಲ್ಲಿ ಅವರ ಕಾಳಜಿ ಶ್ಲಾಘನೀಯ ಎಂದರು.

ಕಲಾ ಪ್ರಾಯೋಜಕ ಸಿಎ |ಗಣೇಶ್ ಭಟ್ ಮಾತನಾಡಿ ಪರಿಪೂರ್ಣ ಕಲೆ ಯಕ್ಷಗಾನ. ಇದೀಗ ಈ ಕಲೆಯತ್ತ ಯುವ ಪೀಳಿಗೆ ಆಸಕ್ತರಾಗುತ್ತಿರುವುದು ಆಶಾದಾಯಕ ಎಂದರು.
ಪ್ರಾಯೋಜಕ ನಿವೃತ್ತ ಟೆಲಿಕಾಂ ಅಧಿಕಾರಿ ಎ.ಕೆ.ನಾಯ್ಕ, ದೈವಸ್ಥಾನದ ಧರ್ಮದರ್ಶಿ ಪಿ.ಕೆ.ಉಮೇಶ್ ಮಾತನಾಡಿದರು.

ವ್ಯವಸ್ಥಾಪಕ ಶೇಖರ ಮಣಿಯಾಣಿ ವಂದಿಸಿದರು.ಅಚ್ಯುತ ಅಟ್ಲೂರು ನಿರೂಪಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎಂಜಿನಿಯರ್ ಹರೀಶ್ ನಾಯ್ಕ ಉಪಸ್ಥಿರಿದ್ದರು.
ಬಳಿಕ ಶ್ರೀರಾಮ ನಿರ್ಯಾಣ ಪ್ರಸಂಗ ತಾಳಮದ್ದಲೆ ಪ್ರಸ್ತುತಗೊಂಡಿತು. ಭಾಗವತರಾಗಿ ಡಾ|ರವಿಕುಮಾರ್ ಸೂರಾಲು, ಮೃದಂಗದಲ್ಲಿ ಈಶ್ವರ ಭಂಡಾರಿ, ಚಂಡೆಯಲ್ಲಿ

ಶಂಕರ ಆಚಾರ್ಯ ಗುಡ್ರಿ, ಮುಮ್ಮೇಳದಲ್ಲಿ ಯಕ್ಷ ವಾಗ್ಮಿಗಳಾಗಿ ಎಂ.ಆರ್.ವಾಸುದೇವ ಸಾಮಗ, ಪೂಕಳ ಲಕ್ಷ್ಮೀನಾರಾಯಣ ಭಟ್, ನಿಟ್ಟೂರು ಅನಂತ ಹೆಗ್ಡೆ, ಅಪ್ಪಕುಂಞ ಮಣಿಯಾಣಿ ಮೊದಲಾದವರು ಸಹಕರಿಸಿದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಉತ್ತರ ಭಾರತದ ಹಲವೆಡೆ ಭಾರಿ ಮಳೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ |
July 23, 2025
10:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!
July 23, 2025
3:57 PM
by: ಸಾಯಿಶೇಖರ್ ಕರಿಕಳ
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ | ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
July 23, 2025
2:26 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group