ಯುವ ಕಾಂಗ್ರೆಸ್ ಮುಖಂಡನ ಬೇಜವಾಬ್ದಾರಿ ಹೇಳಿಕೆ | ಜಿಲ್ಲಾಡಳಿತದ ಕ್ರಮ ಸೂಕ್ತವಾಗಿದೆ – ಸಂಜೀವ ಮಠಂದೂರು

April 18, 2020
2:06 PM

ಪುತ್ತೂರು: ಯುವ ಕಾಂಗ್ರೆಸ್ ಮುಖಂಡರೊಬ್ಬರು ಕೊರೊನಾ ವೈರಸ್ ಹರಡುವುದು  ತಡೆಯುವ ಕಠಿಣ ಸಂದರ್ಭದಲ್ಲೂ ರಾಜಕೀಯ ಮಾಡಲು ಮುಂದಾಗಿದ್ದಾರೆ. ಜಿಲ್ಲಾಡಳಿತ ಸೂಕ್ತವಾದ  ಕ್ರಮಗಳನ್ನು  ಕೈಗೊಂಡ ಕಾರಣದಿಂದಲೇ ಜಿಲ್ಲೆಯಲ್ಲಿ  ಕೊರೊನಾ ವೈರಸ್ ಹರಡುವುದು  ತಡೆಯಲು ಸಾಧ್ಯವಾಗಿದೆ. ಇಂತಹ ಕೀಳುಮಟ್ಟದ ರಾಜಕೀಯ ಇಂತಹ ಸಂದರ್ಭದಲ್ಲಿ ಮಾಡಬಾರದು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಉಪ್ಪಿನಂಗಡಿಯಲ್ಲಿ  ಕೊರೊನಾ ಪಾಸಿಟಿವ್ ಆದ ವ್ಯಕ್ತಿಯ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರೊಬ್ಬರು ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಮನುಷ್ಯನ ಜೀವನ ಜೊತೆ ಚೆಲ್ಲಾಟವಾಡುವ ಹೇಳಿಕೆಗಳನ್ನು  ತೀವ್ರವಾಗಿ ಖಂಡಿಸುತ್ತೇನೆ ಎಂದು ಸಂಜೀವ ಮಠಂದೂರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದ್ದಾರೆ.  ಇಂತಹ ನಾಯಕರು ಇನ್ನು ಮುಂದಾದರೂ, ಬೇಜವಾಬ್ದಾರಿ ಹೇಳಿಕೆ ನೀಡುವುದು ಬಿಟ್ಟು ಸಮಾಜಕ್ಕೆ ತಾವೇನು ಕೊಡುಗೆ ನೀಡುತ್ತಿದ್ದೇವೆ ಎಂದು ಮಾಡಿ ತೋರಿಸಲಿ  ಎಂದು  ಪ್ರತಿಕ್ರಿಯೆ ನೀಡಿದ್ದಾರೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಇಲ್ಲಿ  ರಾಜಕೀಯ ಮಾಡುವುದು , ಉದ್ದೇಶಪೂರ್ವಕವಾಗಿ ಟೀಕೆ ಮಾಡುವುದು  ಸರಿಯಲ್ಲ.ಉಪ್ಪಿನಂಗಡಿ ಯುವಕನಿಗೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ  ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಿಸಿದ ರೀತಿಯಲ್ಲಿಯೇ ಕ್ವಾರಂಟೈನ್ ನಲ್ಲಿ ಇರಿಸಿದ್ದು ಸ್ಪಷ್ಟವಾಗಿ. ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಆದರೆ  ಕಾಂಗ್ರೆಸ್ ನಾಯಕರುಗಳು ಇಂತಹ ಕಠಿಣ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಇವರಿಗೆ ನಮ್ಮ ಜನರ ಆರೋಗ್ಯದ ಮೇಲೆ ಒಂದಿಷ್ಟು ಕಾಳಜಿ ಇದ್ದರೆ, ಇಂತಹ ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ.  ಆಯಾ ಪ್ರದೇಶಗಳಲ್ಲಿ ಜನರು ಲಾಕ್ಡೌನ್ ನಿಯಮ ಪಾಲಿಸುವಂತೆ ಜನಸಮುದಾಯವನ್ನು ಪ್ರೋತ್ಸಾಹಿಸಬೇಕು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror