‘ಯುವಶಕ್ತಿ’ ಪ್ರಬಂಧ, ಕಿರುಚಿತ್ರ ಸ್ಪರ್ಧೆ ಫಲಿತಾಂಶ

June 30, 2019
11:00 AM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.1ರಂದು ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಪದವಿ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಯುವಶಕ್ತಿ’ (ದಿ ಪವರ್ ಆಫ್ ಯೂತ್) ವಿಷಯಾಧಾರಿತವಾಗಿ ಪ್ರಬಂಧ, ಕಿರುಚಿತ್ರ ಆಯೋಜಿಸಲಾಗಿದ್ದು, ಒಟ್ಟು 4 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Advertisement
Advertisement

ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಹೆವಿಕಾ ಮೆಲಾನಿ ಅಲ್ವಾರಿಸ್ ಪ್ರಥಮ ಸ್ಥಾನ, ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲಿಶೇಲ್ ಲೀಮಾ ಡಿಸೋಜ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಿರುಚಿತ್ರ ಸ್ಪರ್ಧೆಯಲ್ಲಿ ಮಡಿಕೇರಿ ಕೆ.ಎಂ. ಕಾರ್ಯಪ್ಪ ಕಾಲೇಜಿನ ತೃತೀಯ ವರ್ಷದ ಬಿಎ ವಿದ್ಯಾರ್ಥಿ ರಾಜೇಶ್ ಜಿ. ಮತ್ತು ನಿಶಾ ವಿ.ಆರ್. ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಜೇತರಿಗೆ ನಗದು ಪ್ರಶಸ್ತಿ, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ನೀಡಲಾಗುವುದು.

ಪ್ರಶಸ್ತಿ ವಿತರಣೆ: ಜುಲಾಯಿ 1ರಂದು ಸಂಜೆ 4ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group