ರಾಜ್ಯ ಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್: ‘ಕೃಷಿ ಉದ್ಯಮಶೀಲತಾ ಅಭಿವೃದ್ಧಿ’ ಕುರಿತು ಕೃಷಿ ವಿಚಾರ ಗೋಷ್ಠಿ

December 2, 2019
1:45 PM

ಪುತ್ತೂರು: ಹಿಂದೆ ಉತ್ತಮ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುವುದೇ ಕನಸಾಗಿತ್ತು. ಆದರೆ ಅದು ಬದಲಾಗಿದೆ. ಉತ್ತಮ ಶಿಕ್ಷಣಸಂಸ್ಥೆಯೊಂದಿಗೆ ಯಾವ ವಿಷಯದಲ್ಲಿ ಯಾವ ಕ್ಷೇತ್ರದಲ್ಲಿ ಉದ್ಯೋಗ ದೊರಕುತ್ತದೋ ಅದನ್ನು ಹರಸಿ ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಇದರ ಬದಲಾಗಿ ವಿದ್ಯಾರ್ಥಿಗಳು ತಮಗಿಷ್ಟ ಬಂದ ಕ್ಷೇತ್ರದಲ್ಲಿ ಉದ್ಯಮಶೀಲರಾಗುವಂತೆ ಪ್ರೇರೇಪಿಸಬೇಕು ಇವರ ಮುಖಾಂತರ ಹಲವಾರು ಉದ್ಯೋಗವನ್ನು ಸೃಷ್ಟಿಸಿ ನೀಡುವಂತರಾಗಬೇಕು ಎಂದು ಬೆಂಗಳೂರಿನ ಸೋನಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಯಜ್ಞ ನಾರಾಯಣ ಕಮ್ಮಾಜೆ ತಿಳಿಸಿದರು.

Advertisement
Advertisement

ಅವರು ಇಲ್ಲಿನ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಅನ್ವೇಷಣಾ- 2019 ರಾಜ್ಯಮಟ್ಟದ ಅಗ್ರಿ ಟಿಂಕರಿಂಗ್ ಫೆಸ್ಟ್ ನ ಕೊನೆಯ ದಿನದ ತೃತೀಯ ಕೃಷಿ ವಿಚಾರ ಗೋಷ್ಠಿಯಲ್ಲಿ ‘ಕೃಷಿ ಉದ್ಯಮಶೀಲನಾ ಅಭಿವೃದ್ಧಿ’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ರವಿವಾರ ಮಾತನಾಡಿದರು.  ಪ್ರತಿಯೊಬ್ಬ ಯುವಕರು ಪಂಚಸೂತ್ರಗಳನ್ನು ಅಳವಡಿಕೊಂಡರೆ ಉದ್ಯಮಶೀಲರಾಗಲು ಸಾಧ್ಯ. ಈ ಪಂಚಸೂತ್ರಗಳು ಕೇವಲ ಇಂಜಿನಿಯರಿಂಗ್ ಅಥವಾ ಇಂತದ್ದೇ ಕ್ಷೇತ್ರಕ್ಕೆ ಸೀಮಿತವಾಗಿಲ್ಲ ಇದು ಕೃಷಿಯಿಂದ ಹಿಡಿದು ಎಲ್ಲಾ ಉದ್ಯೋಗಕ್ಕೆ ಅಥವಾ ವ್ಯವಹಾರಕ್ಕೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಧರ್ಮ ಟೆಕ್ನಾಲಜೀಸ್ ಪ್ರೈವೇಟ್ ಲಿ.ನ ವ್ಯವಸ್ಥಾಪಕ ನಿರ್ದೇಶಕಿ ಶೈಲಜಾ ವಿಠಲ್ ಮಾತನಾಡಿ, ಅನ್ವೇಷಣಾ ಪ್ರದರ್ಶನವು ಕೇವಲ ಪ್ರದರ್ಶನಕ್ಕೆ ಮಾತ್ರ ಮೀಸಲಾಗದೆ ಅದನ್ನು ಬೆಳೆಸುವ ಹಾಗೂ ಅಭಿವೃದ್ಧಿ ಪಡಿಸುವ ಕರ್ತವ್ಯ ನಮ್ಮಮೇಲಿದೆ ಎಂದರಲ್ಲದೆ ನೂತನ ಅನ್ವೇಷಣಾಕಾರರು ಗೆಲುವಿನ ಪಥವನ್ನು ಕಾಣಲಿ ಎಂದು ಹಾರೈಸಿದರು.

ಲಘು ಉದ್ಯೋಗ ಭಾರತಿ ಕರ್ನಾಟಕ ಇದರ ಇಸಿ ಸದಸ್ಯ ರವೀಂದ್ರನಾಥ್ ಕೌಶಿಕ್ ಮಾತನಾಡಿ, ನಿರುದ್ಯೋಗ ದೇಶದ ಸಮಸ್ಯೆಯಾಗಿರುವುದರಿಂದ ಅದರ ನಿವಾರಣೆಗೆ ಉತ್ತಮ ಕೆಲಸದ ಕೌಶಲ್ಯಗಳನ್ನು ರೂಪಿಸುವುದು ಅತ್ಯಗತ್ಯವಾಗಿದೆ. ಜೀವನದ ಪ್ರಗತಿಗೆ ಗೆಲುವು ಎಂಬುದು ನಮ್ಮ ತಲೆಯನ್ನು ತುಂಬಬಾರದು ಹಾಗೆಯೆ ಸೋಲು ನಮ್ಮ ಮನಸ್ಸನ್ನು ತುಂಬಬಾರದು ಎಂದು ಹೇಳಿದರು.  ದಿನಕರ ಮೂರ್ತಿ ಕೃಷ್ಣ ಮಾತನಾಡಿ, ಯಾವುದೇ ಸಂದರ್ಭಗಳನ್ನು ಅದರ ಪೂರ್ಣ ಅರಿವಾಗದೆ ಮತ್ತು ಒಪ್ಪಿಕೊಳ್ಳದೆ ಅದನ್ನು ಯಾಕೆ ಎಂಬ ಪ್ರಶ್ನೆಯೊಂದಿಗೆ ನಮ್ಮ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕು, ಹಾಗೆಯೇ ಪ್ರಗತಿಯ ಜೀವನಕ್ಕೆ ಶ್ರಮ ಅತ್ಯಗತ್ಯ ಎಂದು ತಿಳಿಸಿದರು.

ಲಘು ಉದ್ಯೋಗ ಭಾರತಿ ಕರ್ನಾಟಕದ ಕಾರ್ಯದರ್ಶಿ ನಾರಾಯಣ ಪ್ರಸನ್ನ ಅವರು ಮಾತನಾಡಿ, ಸಮಯವು ಮೌಲ್ಯಯುತವಾದದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಸಾಧನೆಗೆ ಬದ್ಧರಾದರೆ ಉದ್ಯಮಶೀಲರಾಗಬಹುದು ಎಂದು ತಿಳಿಸಿದರು. ಶಿವಾನಂದ ಅವತಿಮಾರ್ ಮಾತನಾಡಿ, ಸಾರ್ಥಕ ಜೀವನ ನಡೆಸುವುದೇ ಜೀವನದ ಗುರಿಯಾಗಿರಲಿ, ಉದ್ಯಮಶೀಲರು ಸರಿಯಾದ ಮಾರ್ಗವನ್ನು ಆಯ್ದುಕೊಂಡು ಉದ್ಯಮವನ್ನು ಬೆಳೆಸಬೇಕು ಎಂದರು.

ಈ ಸಂದರ್ಭದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕದ ಅಧ್ಯಕ್ಷ ಪಿ.ಎಸ್. ಶ್ರೀಕಂಠದತ್ತ ಅವರು ಉಪಸ್ಥಿತರಿದ್ದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಆಶಾ ಕೆ. ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯ ಚಂದಶೇಖರ ವಂದಿಸಿದರು. ಶಿಕ್ಷಕಿ ಸುಪ್ರೀತಾ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror