ರಾಜ್ಯ ಮಟ್ಟದ ಅಗ್ರಿಟಿಂಕರಿಂಗ್ ಫೆಸ್ಟ್ : ‘ಬೌದ್ಧಿಕ ಆಸ್ತಿ ಹಕ್ಕುಗಳು’ ವಿಷಯದ ಕುರಿತು ಕೃಷಿ ವಿಚಾರ ಗೋಷ್ಠಿ

December 1, 2019
11:07 AM

ಪುತ್ತೂರು: ಅನ್ವೇಷಣಾ 2019 ಅಗ್ರಿ ಟಿಂಕರಿಂಗ್ ಫೆಸ್ಟ್ ನ ಮೊದಲ ದಿನದ ದ್ವಿತೀಯ ಕೃಷಿ ವಿಚಾರ ಗೋಷ್ಠಿಯು ‘ಬೌದ್ಧಿಕ ಆಸ್ತಿ ಹಕ್ಕುಗಳು(ಪೇಟೆಂಟ್) ವಿಷಯದ ಕುರಿತು ನಡೆಯಿತು.

Advertisement
Advertisement
Advertisement
Advertisement

ಕರ್ನಾಟಕ ಲಘು ಉದ್ಯೋಗ ಭಾರತಿ ಇದರ ಉಪಾಧ್ಯಕ್ಷ ಬಿ.ಎಸ್. ಶ್ರೀನಿವಾಸನ್ ಮಾತನಾಡಿ, ಪೇಟೆಂಟ್ ಬಗ್ಗೆ ತಿಳುವಳಿಕೆ ಅಗತ್ಯವಿದ್ದು ಇದು ಜನ ಸಾಮಾನ್ಯರಿಗೆ ತಲುಪಬೇಕು. ಜೊತೆಗೆ ಈ ವಿಷಯವನ್ನು ಶಾಲೆ-ಕಾಲೇಜುಗಳಲ್ಲೇ ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ನಮ್ಮ ಹೊಸ ಆವಿಷ್ಕಾರಗಳಿಗೆ ಬೌದ್ಧಿಕ ಆಸ್ತಿ ಹಕ್ಕಿನ ಅಗತ್ಯವಿದ್ದು, ನಮ್ಮ ಬುದ್ಧಿ ಶಕ್ತಿಯಿಂದ ಸಾಧಿಸಿದಂತಹ ಹೊಸ ಅನ್ವೇಷಣೆಯು ಇನ್ಯಾರದೋ ಪಾಲಾಗದಂತೆ ಪೇಟೆಂಟ್ ಸಂರಕ್ಷಿಸುತ್ತದೆ. ಈ ನಿಟ್ಟಿನಲ್ಲಿ ಲಘು ಉದ್ಯೋಗ ಭಾರತಿಯು ಇದಕ್ಕೆ ಸಹಕಾರ ನೀಡುತ್ತದೆ. ಮಾತ್ರವಲ್ಲದೇ ಮಾರ್ಗದರ್ಶನವನ್ನು ನೀಡುತ್ತದೆ ಎಂದು ತಿಳಿಸಿದರು.

Advertisement

ಲಘು ಉದ್ಯೋಗ ಭಾರತಿ ಕರ್ನಾಟಕ ಇದರ ಇಸಿ ಸದಸ್ಯ ರವೀಂದ್ರನಾಥ್ ಕೌಶಿಕ್ ಮಾತನಾಡಿ, ಭಾರತದಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತಾದ ಮಾಹಿತಿಯ ಕೊರತೆ ಎದ್ದು ಕಾಣುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯ ಪ್ರವೃತರಾಗಬೇಕು ಎಂದು ಹೇಳಿದರು.

ಲಘು ಉದ್ಯೋಗ ಭಾರತಿ ಕರ್ನಾಟಕದ ಕಾರ್ಯದರ್ಶಿ ನಾರಾಯಣ ಪ್ರಸನ್ನ ಅವರು ಮಾತನಾಡಿ, ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತಾಗಿ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು. ಭಾರತದ ಪ್ರತಿಯೊಂದು ಅನ್ವೇಷಣೆಯೂ ಪೇಟೆಂಟ್ ಪಡೆಯುವಂತಾದರೆ ಅಖಂಡ ಭಾರತದ ನಿರ್ಮಾಣ ಶತ ಸಿದ್ಧ ಎಂಬುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಅನ್ವೇಷಣಾ 2019ರ ಮುಖಾಂತರ ಹೊಸ ಅನ್ವೇಷಣಕ್ಕೆ ದಾರಿ ಇದಾಗಿದೆ ಎಂದು ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕದ ಅಧ್ಯಕ್ಷ ಪಿ.ಎಸ್ ಶ್ರೀಕಂಠ ದತ್ತ ಅವರು ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕನ್ನಡ ಶಿಕ್ಷಕಿ ಸಾಯಿ ಗೀತಾ ಎಸ್.ರಾವ್ ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಭರತ್ ಪೈ ವಂದಿಸಿದರು. ಶಿಕ್ಷಕಿ ಪದ್ಮಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror