ರಾಜ್ಯದಲ್ಲಿ ಒಂದೇ ದಿನ 53 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847 ಕ್ಕೆ ಏರಿಕೆ |

May 10, 2020
1:16 PM

ಬೆಂಗಳೂರು: ರಾಜ್ಯದಲ್ಲಿ  ಭಾನುವಾರ ಬೆಳಗ್ಗೆಯವರೆಗೆ ಅಂದರೆ 24 ಗಂಟೆಯಲ್ಲಿ 53 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

Advertisement

ಹಸಿರು ವಲಯ ಶಿವಮೊಗ್ಗದಲ್ಲಿ 8 ಸೋಂಕಿತ ಪ್ರಕರಣಗಳು ದಾಖಲಾಗಿದೆ . ಅಹಮದಾಬಾದ್‌ಗೆ ಭೇಟಿ ನೀಡಿದ್ದ ಜನರಿಗೆ ಶಿವಮೊಗ್ಗದಲ್ಲಿ  ಸೋಂಕು ಕಾಣಿಸಿಕೊಂಡಿದೆ.

53 ಪ್ರಕರಣಗಳ ಪೈಕಿ ಬೆಳಗಾವಿ 22, ಶಿವಮೊಗ್ಗ 8, ಬೆಂಗಳೂರು 3, ಉತ್ತರ ಕನ್ನಡದ ಭಟ್ಕಳದಲ್ಲಿ 7, ಕಲಬುರಗಿ 3, ಬಾಗಲಕೋಟೆ 8, ದಾವಣಗೆರೆ 1, ಚಿಕ್ಕಬಳ್ಳಾಪುರ 1 ಕೇಸ್ ದಾಖಲಾಗಿದೆ. ಬೆಳಗಾವಿಯಲ್ಲಿ ಇಂದು ಅತಿ ಹೆಚ್ಚು ಸೋಂಕು ವರದಿಯಾಗಿದ್ದು, ಇವರೆಲ್ಲರು ರಾಜಸ್ಥಾನದ ಅಜಮೀರ್‌ಗೆ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ.  ವೈರಸ್’ಗೆ 2,109 ಮಂದಿ ಇದುವರೆಗೆ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ.  ದೇಶದಲ್ಲೇ ಅತೀ ಹೆಚ್ಚು ಸೋಂಕಿತರು  ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ.

 

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group