ರಾಜ್ಯದಲ್ಲಿ “ಸಂಘ”ಟಿತ ಬಿಜೆಪಿ – ನಳಿನ್ ಭರವಸೆ

August 27, 2019
3:05 PM

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಇನ್ನಷ್ಟು ಬಲಪಡಿಸುವ ಹಾಗೂ ಮತ್ತೆ ಅಧಿಕಾರಕ್ಕೆ ತರುವ ಸರ್ವರೀತಿಯ ಪ್ರಯತ್ನ ಮಾಡಲಾಗುತ್ತದೆ. ಈ ಹಂತದಲ್ಲಿ ಪಕ್ಷದ ಎಲ್ಲಾ ನಾಯಕರನ್ನೂ ಒಂದುಗೂಡಿಸಿ ಸಂಘಟಿತವಾಗಿ ಯಾವುದೇ ಸಮಸ್ಯೆ ಎದುರಿಸಲಾಗುವುದು. ಕಾರ್ಯಕರ್ತರ ನಿರೀಕ್ಷೆಗೆ ತಕ್ಕ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ನೂತನ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲು ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು. ಪಕ್ಷದ ಒಳಗಿನ ಎಲ್ಲಾ ಗೊಂದಲಗಳು ನಿವಾರಣೆಯಾಗಿ ಒಂದಾಗಿ ಪಕ್ಷ ಸಂಘಟನೆ ಮಾಡಲಾಗುತ್ತದೆ ಎಂದ ಅವರು ಪ್ರತೀ ಜಿಲ್ಲೆಗೂ ಪ್ರವಾಸ ಮಾಡಿ ಪಕ್ಷದ ಸಂಘಟನೆಯಲ್ಲಿ  ತೊಡಗಿಸಿಕೊಳ್ಳುವೆ ಎಂದು ಹೇಳಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ನಾವಧಿ ಪ್ರಚಾರಕರಾಗಿ 12 ವರ್ಷಗಳ ಕಾಲ ಸಂಘಟನೆಗಾಗಿ ದುಡಿದು ಬಳಿಕ ದಕ ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿ ಸಂಸದರಾದ ನಳಿನ್‌ಕುಮಾರ್ ಕಟೀಲ್ ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ನೂತನ ಅಧ್ಯಕ್ಷ ನಳಿನ್ ಕುಮಾರ್  ಅವರಿಗೆ ಮಾಜಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ರಾಜ್ಯದ ಬಹುತೇಕ ಬಿಜೆಪಿ ನಾಯಕರು ಉಪಸ್ಥಿತರಿದ್ದರು.  ಪ್ರಮುಖರಾದ  ಡಿ ವಿ ಸದಾನಂದ ಗೌಡ , ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಅಶ್ವತ್ಥ ನಾರಾಯಣ , ಲಕ್ಷ್ಮಣ ಸವದಿ , ಸಿ ಟಿ ರವಿ, ಗೋವಿಂದ ಕಾರಜೋಳ, ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಕೇಂದ್ರ ಸಚಿವ ಸುರೇಶ್ ಅಂಗಡಿ ,ಕೆ ಎಸ್ ಈಶ್ವರಪ್ಪ, ಸುರೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಕಚೇರಿ ಎದುರಿನ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಒಂದು ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮಕ್ಕೂ ಮುನ್ನ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಿ ನಳಿನ್ ಕುಮಾರ್ ಕಟೀಲು ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಜೊತೆಯಲ್ಲಿದ್ದರು.

ಕಾರ್ಯಕ್ರಮದ ಬಳಿಕ ನಳಿನ್ ಕುಮಾರ್ ಕಟೀಲು ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪರ್ಕಕ್ಕೆ  ಕರೆತಂದ ಸದ್ಯ ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಮುಖಂಡರೂ ಆದ ಸವಣೂರಿನ ಬಿ.ಕೆ.ರಮೇಶ್ ಅವರನ್ನು ಭೇಟಿಯಾದರು. ರಮೇಶ್ ಅವರನ್ನು ನಳಿನ್ ಕುಮಾರ್ ಕಟೀಲು ಅವರು ಗುರುಗಳು ಎಂದೇ ಸಂಬೋಧಿಸಿ ಮಾತನಾಡುತ್ತಾರೆ.

ಬಿ ಕೆ ರಮೇಶ್ ಜೊತೆ ನಳಿನ್ ಕುಮಾರ್ ಕಟೀಲು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror