ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಪುತ್ತೂರು

June 17, 2019
12:00 PM

ಪುತ್ತೂರು: ಕಳೆದ ಎರಡು ಮೂರು ವರುಷಗಳಿಂದ ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ಪುತ್ತೂರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಸ್ವಚ್ಛತಾ ಅಭಿಯಾನವು ಈ ಬಾರಿ ಜೈನಭವನದ ಆಸುಪಾಸಿನಲ್ಲಿ ಮತ್ತು ಬೈಪಾಸ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ರೋಟರಿ ಕ್ಲಬ್ ನ ಎ.ಜೆ ರೈ ಮತ್ತು ನಗರಸಭಾ ಸದಸ್ಯೆ ಗೌರಿ ಬನ್ನೂರು ಅವರು ಜಂಟಿಯಾಗಿ ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿದರು. ಸುಮಾರು 50 ಜನ ಭಾಗವಹಿಸಿದ ಈ ಕಾರ್ಯಕ್ರಮವು ಮಳೆಗಾಲದಲ್ಲಿ ಕೂಡ ನಡೆಯುತ್ತಿರುವುದು ಶ್ಲಾಘನೀಯ ಎಂದು ಎ.ಜೆ ರೈ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಗೌರಿ ಬನ್ನೂರು ಅವರು ಮಾತನಾಡಿ “ಪ್ರಧಾನಿಯವರ ಈ ಯೋಜನೆಯು ಅಭೂತಪೂರ್ವವಾಗಿ ಯಶಸ್ವಿಯಾಗಿ ನಡೆಯುತ್ತಿದ್ದು ಸಾಕಷ್ಟು ಜನ ಜಾಗೃತರಾಗಿದ್ದಾರೆ” ಎಂದರು.ನಂತರ ಮಳೆಗಾಲದಲ್ಲಿ ಅವಶ್ಯವಾಗಿ ಬೇಕಾಗಿರುವ ರಸ್ತೆ ಬದಿಯ ಕಾಲುವೆಯನ್ನು ಸರಿಪಡಿಸಲಾಯಿತು.ವಾಹನ ಸವಾರರಿಗೆ ಅಡ್ಡಿಯಾಗುತ್ತಿದ್ದ ಪೊದೆಗಳನ್ನು ಕಡಿಯಲಾಯಿತು.

ಸ್ವಚ್ಛತಾ ಕಾರ್ಯದ ಕೊನೆಯಲ್ಲಿ ಚಹಾ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿತ್ತು.ಧನ್ಯಕುಮಾರ್ ಬೆಳಂದೂರು ಅವರು ಟಿಪ್ಪರ್ ವ್ಯವಸ್ಥೆಯನ್ನು ಮಾಡಿದ್ದರು.’ಟೀಮ್ ನರೇಂದ್ರ’ದ ಸಂಚಾಲಕ ಸಂತೋಷ್ ಕುಮಾರ್ ವಾಗ್ಲೆ,ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್ ರೈ ಪಡ್ಡಂಬೈಲು,ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಮೂಲ್ಯ,ರಾಜ್ಯಪ್ರಶಸ್ತಿ ವಿಜೇತರಾದ ಸುರೇಶ್ ಶ್ರೀಶಾಂತಿ,ನಗರಸಭಾ ಸದಸ್ಯರಾದ ಪಿ.ಜಿ ಜಗನ್ನಿವಾಸ್ ರಾವ್ ಮತ್ತು ಶಿವರಾಮ ಸಫಲ್ಯ ಮೊದಲಾದವರು ಕಸ ವಿಲೇವಾರಿಯಲ್ಲಿ ತೊಡಗಿಸಿಕೊಂಡಿದ್ದರು.

ರಾಮಕೃಷ್ಣ ಮಿಷನ್ ನ ಕಾರ್ಯಕರ್ತ ಶ್ರೀಕೃಷ್ಣ ಉಪಾಧ್ಯಾಯ ಮತ್ತು ದಿನೇಶ್ ಕುಮಾರ್ ಜೈನ್ ಕಾರ್ಯಕ್ರಮವನ್ನು ಸಂಘಟಿಸಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ
June 3, 2025
9:55 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group