ರೈತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ – ಬಿ.ಎಸ್.ಯಡಿಯೂರಪ್ಪ ಭರವಸೆ

September 9, 2019
7:19 PM

ಬೆಂಗಳೂರು: ರೈತರ ಹಿತರಕ್ಷಣೆಗೆ ಸರಕಾರ ಯಾವತ್ತೂ ಬದ್ಧವಾಗಿದೆ. ನೆರೆಯಿಂದ ಹಾನಿಗೀಡಾದ ರೈತರಿಗೆ ರಾಜ್ಯ ಸರಕಾರ ಸಾಕಷ್ಟು ಪರಿಹಾರವನ್ನು ನೀಡಿದೆ. ಇನ್ನಷ್ಟು ಯೋಜನೆಗಳನ್ನು ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುವುದು. ರಾಜ್ಯದ  ಎಲ್ಲಾ ರೈತರ ಹಿತ ಕಾಪಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಅವರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ , ಬಸವರಾಜು ಹಾಗು ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್‍ ಯಡಿಯೂರಪ್ಪ ಅವರನ್ನು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ‌ ಮಾಡಿದ ಸಂದರ್ಭ ಮಾತುಕತೆ ನಡೆಸಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಮೈಕ್ರೋ ಪೈನಾನ್ಸ್ ಕಂಪನಿಗಳು ಗಂಜಿ ಕೇಂದ್ರಗಳಿಗೆ ಹೋಗಿ ಹಣ ವಸೂಲಿಗೆ ಮುಂದಾಗಿರುವ ಕುರಿತು ಕೋಡಿಹಳ್ಳಿ ಚಂದ್ರಶೇಖರ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಅವುಗಳ ವಿರುದ್ದ ಕ್ರಮ‌ಕೈಗೊಳ್ಳಲು ಮನವಿ ಮಾಡಿದರು.

ತಕ್ಷಣವೇ ರಾಯಚೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಮುಖ್ಯಮಂತ್ರಿ ಗಳು ಕೂಡಲೇ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಎಲ್ಲಾ ಜಿಲ್ಲೆಗಳಲ್ಲೂ ಈ ಬಗ್ಗೆ ಗಮನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

ಬರ ಪರಿಹಾರ ಮೊತ್ತ ಬಿಡುಗಡೆ, ಕೃಷ್ಣಾ ನದಿ ನಿರ್ವಹಣ ಪ್ರಾಧಿಕಾರ ರಚನೆ, ನೀರಾ ಮಂಡಳಿ ಸ್ಥಾಪನೆ, ಯಶಸ್ವಿನಿ ಯೋಜನೆಜಾರಿ ಸೇರಿದಂತೆ ರೈತರ ನಿಯೋಗ ಸಲ್ಲಿಸಿದ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಿತು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ರೈತ ಮುಖಂಡರೂ ಭಾಗಿಯಾಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror