ರೈತರಿಗೂ ಇನ್ನು ಸಿಗಲಿದೆ ಪೆನ್ಷನ್ : ನಮೋ 2.0 ಸರಕಾರದಿಂದ ಕೃಷಿಗೆ ಕೊಡುಗೆ

June 1, 2019
1:30 PM

ಬೆಂಗಳೂರು:  ನರೇಂದ್ರ ಮೋದಿ ಸರಕಾರದ 2 ನೇ ಅವಧಿಯ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಕೊಡುಗೆ ನೀಡಿದೆ. ಇದು  2 ನೇ ಅವಧಿಯ 1 ನೇ ಹೆಜ್ಜೆ.

Advertisement
Advertisement

ಎಲ್ಲಾ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಲು ಹಾಗೂ 1 ಲಕ್ಷ ರೂ.ವರೆಗೆ ಬಡ್ಡಿರಹಿತ ಅಲ್ಪಾವಧಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲಗಳನ್ನು ನೀಡಲು ಉದ್ದೇಶಿಸಲಾಗಿದೆ. ಇನ್ನು  ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂ. ನೀಡುವುದನ್ನು ಎಲ್ಲ ರೈತರಿಗೂ ವಿಸ್ತರಿಸಲಾಗಿದೆ. ಈ ಮೊದಲು ಕಿಸಾನ್ ಯೋಜನೆಯು 2 ಹೆಕ್ಟೇರ್‌ವರೆಗೆ ಭೂಮಿಯುಳ್ಳ ರೈತರಿಗೆ ಮಾತ್ರ ಅನ್ವಯವಾಗುತ್ತಿತ್ತು.ಇದರಿಂದ ದೇಶದ ಸುಮಾರು 15 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಒಟ್ಟು ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಪೆನ್ಷನ್ ಯೋಜನಾ ಅಡಿ 18ರಿಂದ 40 ವರ್ಷದವರೆಗಿನ ನೋಂದಾಯಿತ ಸಣ್ಣ ಹಾಗೂ ಅತಿ ಸಣ್ಣ ರೈತರು 60 ವರ್ಷ ಕ್ರಮಿಸಿದ ಬಳಿಕ ಕನಿಷ್ಠ 3 ಸಾವಿರ ರೂ. ನಿಗದಿತ ಪಿಂಚಣಿ ಪಡೆದುಕೊಳ್ಳುವ ಯೋಜನೆ ಇದಾಗಿದೆ.

ಈ ಎರಡು ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಹಾಗೂ 2 ಕೋಟಿ ಅಧಿಕ ರೈತರನ್ನು ಸೇರಿಸಿಕೊಂಡು ಒಟ್ಟು 14.5 ಕೋಟಿ ಫಲಾನುಭವಿಗಳಾಗುತ್ತಾರೆ ಎಂದು ಅಂದಾಜಿಸಲಾಗಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ
May 16, 2025
7:23 AM
by: The Rural Mirror ಸುದ್ದಿಜಾಲ
ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |
May 16, 2025
7:16 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group