ರೋಟರಿ ಸುಳ್ಯದ ವತಿಯಿಂದ ಓಣಂ ಆಚರಣೆ

September 12, 2019
10:00 AM

ಸುಳ್ಯ: ಓಣಂ ಆಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ  ಆಚರಿಸಲಾಯಿತು.

ಓಣಂ ಪೂಕಳಂನ್ನು ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ರಾಮಚಂದ್ರ  ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೊ.ಬಾಸ್ಕರನ್ ನಾಯರ್ ಮಾತನಾಡಿ ಓಣಂ ಹಬ್ಬ ಮುಂಚೆ ಕೇರಳದಲ್ಲಿ ಆಚರಿಸುತ್ತಿದ್ದರು. ಈಗ ಮಲಯಾಳಿಗರು ವಿಶ್ವದಾದ್ಯಂತ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಾಬಲಿಯನ್ನು ನೆನಪಿಸುವ ಹಾಗೂ ಅವರ ಆಡಳಿತವನ್ನು ಜನರಿಗೆ ತಲುಪಿಸುವ ಹಬ್ಬವಾಗಿದೆ ಓಣಂ. ಓಣಂ ಹಬ್ಬ ಜಾತಿ, ಮತ ಬೇಧ ಭಾವಗಲಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಹೇಳಿ ಓಣಂ ಗೀತೆಯನ್ನು ಹಾಡಿ ಸಭಿಕರನ್ನು ರಂಜಿಸಿದರು. ಓಣಂ ನಮ್ಮೆಲ್ಲರಲ್ಲಿ ಐಶ್ವರ್ಯ, ಸಮೃದ್ಧಿ, ನೆಮ್ಮದಿ ತುಂಬಿತುಳುಕಲಿ ಎಂದು ಹಾರೈಸಿದರು.

ಸಭಾಧ್ಯಕ್ಷೆತೆಯನ್ನು ರೊ.ಡಾ.ಪುರುಷೋತ್ತಮ ವಹಿಸಿದ್ದರು. ಅಸಿಸ್ಟಂಟ್ ಗವರ್ನರ್ ರೊ. ಡಾ.ಕೇಶವ ಪಿ. ಕೆ., ರೊ.ದಯಾನಂದ ಆಳ್ವ, ರೊ.ಡಾ.ಗುರುರಾಜ್  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರೊ.ಸನತ್ ದನ್ಯವಾದ ಹೇಳಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror