ಧರ್ಮಸ್ಥಳ ಲಕ್ಷದೀಪೋತ್ಸವದಲ್ಲಿ ಲಲಿತಮ್ಮನ ವ್ಯವಹಾರ ಸುಲಲಿತ

November 25, 2019
9:07 AM

ಧರ್ಮಸ್ಥಳ: ಲಕ್ಷದೀಪೋತ್ಸವ ಸಂದರ್ಭದಲ್ಲಿ ಅರುವತ್ತು ವರ್ಷದ ಮಹಿಳೆಯೊಬ್ಬರು ಸುಲಲಿತ ವ್ಯವಹಾರ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ.

ಜೀವನೋಪಾಯಕ್ಕಾಗಿ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂದರ್ಭ ವ್ಯಾಪಾರದ ಪುಟ್ಟ ಅಂಗಡಿಯನ್ನುತೆರೆದವರು ಲಿತಮ್ಮ. ನೆಲ್ಲಿಕಾಯಿ, ಮಾವಿನ ಮಿಡಿ, ಪೇರಳೆ ಮೊದಲಾದ ಸತ್ವಪೂರ್ಣ ಗ್ರಾಮೀಣ ಪೌಷ್ಠಿಕ ಆಹಾರಗಳು ಇವರಲ್ಲಿ ಮಿತದರದಲ್ಲಿ ಸಿಗುತ್ತವೆ. 25 ವರ್ಷಗಳ ಹಿಂದೆ ಇವರ ಗಂಡ ನಿಧನರಾದ ಬಳಿಕ “ಕಾಯಕವೇ ಕೈಲಾಸ” ಎಂದು ನಂಬಿ ಪುಟ್ಟ ಅಂಗಡಿ ಪ್ರಾರಂಭಿಸಿದ ಇವರು ಪ್ರಾಮಾಣಿಕ ವ್ಯವಹಾರ ನಡೆಸುತ್ತಾರೆ. ಅತಿಯಾದ ಲಾಭಗಳಿಸುವ ಹಂಬಲ ಈಕೆಗಿಲ್ಲ.

ಎಲ್ಲಾಖರ್ಚು, ವೆಚ್ಚ ಕಳೆದು ದಿನಕ್ಕೆ ಇನ್ನೂರು ರೂ.ನಿವ್ವಳ ಲಾಭಗಳಿಸುತ್ತೇನೆ. ಇದರಲ್ಲೆ ತನಗೆ ತೃಪ್ತಿ, ಸಂತೋಷವಿದೆ ಎಂದು ಲಲಿತಮ್ಮ ಮಂದಹಾಸ ಬೀರುತ್ತಾರೆ.
ವ್ಯವಹಾರದಲ್ಲಿ ಎದುರಾಗುವ ಸಣ್ಣಪುಟ್ಟ ಸವಾಲುಗಳನ್ನು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದು ಆತ್ಮವಿಶ್ವಾಸದಿಂದ ನುಡಿಯುತ್ತಾರೆ ಲಲಿತಮ್ಮ.
ಸಾಮಾನ್ಯವಾಗಿ 60ರ ನಂತರ ಅರಳು ಮರಳು ಎನ್ನುತ್ತಾರೆ. ಆದರೆ ಲಲಿತಮ್ಮನ ಜೀವನದಲ್ಲಿ 60ರ ಹರೆಯ ಮರಳಿ ಅರಳುವ ಪ್ರಾಯ. ಏಕೆಂದರೆ ಅವರಲ್ಲಿ ಜೀವನ ಪ್ರೀತಿ ಹಾಗೂ ಲವಲವಿಕೆ ನಿತ್ಯನೂತನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ
March 30, 2026
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror