ಲೋಕಸಭಾ ಚುನಾವಣಾ ಫಲಿತಾಂಶ: ಎಲ್ಲೆಡೆ ಕಾತರ……ಕುತೂಹಲ….!

May 22, 2019
9:49 PM

ಸುಳ್ಯ: ಮತ ಚಲಾಯಿಸಿ 35 ದಿನಗಳ ಬಳಿಕ ಬರುವ ಲೋಕಸಭಾ ಚುನಾವಣೆ ಫಲಿತಾಂಶದ ಕಾತರ ಇಡೀ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಲ್ಲೆಡೆ ಮನೆ ಮಾಡಿದೆ. ಏಳು ಹಂತದ ಚುನಾವಣೆ ಮೆ.19ಕ್ಕೆ ಮುಗಿಯುತ್ತಿದ್ದಂತೆ ಚುನಾವಣಾ ಫಲಿತಾಂಶ ಕುರಿತಾದ ಕಾತರ, ಚರ್ಚೆ ಮತದಾರರಲ್ಲಿ, ರಾಜಕೀಯ ಪಕ್ಷಗಳಲ್ಲಿ ಎಲ್ಲೆಡೆ ಪ್ರಾರಂಭಗೊಂಡಿತು. ಫಲಿತಾಂಶದ ಮುನ್ನಾ ದಿನವಾದ ಬುಧವಾರವಂತೂ ಫಲಿತಾಂಶ ಕುರಿತಾದ ಕಾತರವೇ ಮುಗಿಲು ಮುಟ್ಟಿತ್ತು. ಎಲ್ಲೆಡೆ ಫಲಿತಾಂಶದ, ಸೋಲು ಗೆಲುವಿನ, ಬಹುಮತದ ಕುರಿತ ಚರ್ಚೆಗಳೇ ಕೇಳಿ ಬರುತ್ತಿತ್ತು.

ಸುಮಾರು ಒಂದೂವರೆ ತಿಂಗಳ ಕಾಲ ನಡೆದ ಬಿರುಸಿನ ಪ್ರಚಾರದ ಬಳಿಕ ಏಪ್ರಿಲ್ 18 ರಂದು ದ.ಕ.ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆದಿತ್ತು. 17,24,460 ಮತದಾರರ ಪೈಕಿ 13,43,378 ಮಂದಿ ಮತ ಚಲಾಯಿಸಿ 77.90 ಶೇ. ಮತದಾನ ದಾಖಲಾಗಿತ್ತು. ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ, ಬಿಎಸ್ ಪಿ, ಉತ್ತಮ ಪ್ರಜಾಕೀಯ ಪಾರ್ಟಿ, ಹಿಂದೂಸ್ತಾನ್ ಜನತಾ ಪಾರ್ಟಿ ಅಭ್ಯರ್ಥಿ ಗಳು ಮತ್ತು ಏಳು ಮಂದಿ ಪಕ್ಷೇತರರು ಸೇರಿ ಒಟ್ಟು 13 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮಧ್ಯೆ ಬಿರುಸಿನ ಸ್ಪರ್ಧೆ ಏರ್ಪಟ್ಟಿತು. ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲ ಇದ್ದರೂ ಎರಡೂ ಪಕ್ಷಗಳು ಗೆಲುವಿನ ನಿರೀಕ್ಷೆಯಲ್ಲಿದೆ.

ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾನ ದಾಖಲಾದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆ ಕುರಿತಾದ ಕುತೂಹಲ ಗರಿಗೆದರಿದೆ. ಇಡೀ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಪಡೆಯುವ ಬಹುಮತ ಫಲಿತಾಂಶ ದಲ್ಲಿ ನಿರ್ಣಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತದೆ. ಆದುದರಿಂದಲೇ ಸುಳ್ಯ ಕ್ಷೇತ್ರದಲ್ಲಿ ಫಲಿತಾಂಶ ಕುರಿತಾದ ಕಾತರ ಸ್ವಲ್ಪ ಹೆಚ್ಚೇ ಇದೆ ಎಂದು ಹೇಳಬಹುದು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಕ್ಕೆ ಬಾಕಿ ಇರುವ ಯೂರಿಯಾ ತ್ವರಿತ ಬಿಡುಗಡೆಗೆ ಒತ್ತಾಯ
September 17, 2025
8:13 PM
by: The Rural Mirror ಸುದ್ದಿಜಾಲ
ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್
September 10, 2025
7:02 AM
by: The Rural Mirror ಸುದ್ದಿಜಾಲ
ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್
September 5, 2025
7:35 AM
by: The Rural Mirror ಸುದ್ದಿಜಾಲ
3 ವರ್ಷಗಳಲ್ಲಿ ಭಾರತದ ಆರ್ಥವ್ಯವಸ್ಥೆ ಏರಿಕೆ | ಕೃಷಿಕರ ಆದಾಯ ಶೇ.8 ರಷ್ಟು ಏರಿಕೆ
August 20, 2025
7:03 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group