ಲೋಕಸಭಾ ಚುನಾವಣಾ ಫಲಿತಾಂಶ: ಎಲ್ಲೆಡೆ ಕಾತರ……ಕುತೂಹಲ….!

May 22, 2019
9:49 PM

ಸುಳ್ಯ: ಮತ ಚಲಾಯಿಸಿ 35 ದಿನಗಳ ಬಳಿಕ ಬರುವ ಲೋಕಸಭಾ ಚುನಾವಣೆ ಫಲಿತಾಂಶದ ಕಾತರ ಇಡೀ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಲ್ಲೆಡೆ ಮನೆ ಮಾಡಿದೆ. ಏಳು ಹಂತದ ಚುನಾವಣೆ ಮೆ.19ಕ್ಕೆ ಮುಗಿಯುತ್ತಿದ್ದಂತೆ ಚುನಾವಣಾ ಫಲಿತಾಂಶ ಕುರಿತಾದ ಕಾತರ, ಚರ್ಚೆ ಮತದಾರರಲ್ಲಿ, ರಾಜಕೀಯ ಪಕ್ಷಗಳಲ್ಲಿ ಎಲ್ಲೆಡೆ ಪ್ರಾರಂಭಗೊಂಡಿತು. ಫಲಿತಾಂಶದ ಮುನ್ನಾ ದಿನವಾದ ಬುಧವಾರವಂತೂ ಫಲಿತಾಂಶ ಕುರಿತಾದ ಕಾತರವೇ ಮುಗಿಲು ಮುಟ್ಟಿತ್ತು. ಎಲ್ಲೆಡೆ ಫಲಿತಾಂಶದ, ಸೋಲು ಗೆಲುವಿನ, ಬಹುಮತದ ಕುರಿತ ಚರ್ಚೆಗಳೇ ಕೇಳಿ ಬರುತ್ತಿತ್ತು.

ಸುಮಾರು ಒಂದೂವರೆ ತಿಂಗಳ ಕಾಲ ನಡೆದ ಬಿರುಸಿನ ಪ್ರಚಾರದ ಬಳಿಕ ಏಪ್ರಿಲ್ 18 ರಂದು ದ.ಕ.ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆದಿತ್ತು. 17,24,460 ಮತದಾರರ ಪೈಕಿ 13,43,378 ಮಂದಿ ಮತ ಚಲಾಯಿಸಿ 77.90 ಶೇ. ಮತದಾನ ದಾಖಲಾಗಿತ್ತು. ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ, ಬಿಎಸ್ ಪಿ, ಉತ್ತಮ ಪ್ರಜಾಕೀಯ ಪಾರ್ಟಿ, ಹಿಂದೂಸ್ತಾನ್ ಜನತಾ ಪಾರ್ಟಿ ಅಭ್ಯರ್ಥಿ ಗಳು ಮತ್ತು ಏಳು ಮಂದಿ ಪಕ್ಷೇತರರು ಸೇರಿ ಒಟ್ಟು 13 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮಧ್ಯೆ ಬಿರುಸಿನ ಸ್ಪರ್ಧೆ ಏರ್ಪಟ್ಟಿತು. ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲ ಇದ್ದರೂ ಎರಡೂ ಪಕ್ಷಗಳು ಗೆಲುವಿನ ನಿರೀಕ್ಷೆಯಲ್ಲಿದೆ.

ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾನ ದಾಖಲಾದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆ ಕುರಿತಾದ ಕುತೂಹಲ ಗರಿಗೆದರಿದೆ. ಇಡೀ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಪಡೆಯುವ ಬಹುಮತ ಫಲಿತಾಂಶ ದಲ್ಲಿ ನಿರ್ಣಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತದೆ. ಆದುದರಿಂದಲೇ ಸುಳ್ಯ ಕ್ಷೇತ್ರದಲ್ಲಿ ಫಲಿತಾಂಶ ಕುರಿತಾದ ಕಾತರ ಸ್ವಲ್ಪ ಹೆಚ್ಚೇ ಇದೆ ಎಂದು ಹೇಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ | ದಾವಣಗೆರೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಂದ ಸಿದ್ಧತೆ ಪರಿಶೀಲನೆ
November 20, 2025
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror