ವಳಲಂಬೆಯಲ್ಲಿ ವಸಂತ ವೇದಶಿಬಿರ ಉದ್ಘಾಟನೆ

April 23, 2019
4:19 AM

ಗುತ್ತಿಗಾರು : ಅನೂಚಾನ ವೇದ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಸಹಯೋಗದೊಂದಿಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ ಶಿಬಿರ ಹಾಗೂ ಗಾಯತ್ರಿ ಯಜ್ಞ ಇತ್ತೀಚೆಗೆ ನಡೆಯಿತು.
ವೇದ ಶಿಬಿರವನ್ನು ಉದ್ಘಾಟಿಸಿದ ವಳಲಂಬೆ ಹಿರಿಯರಾದ ವೇ.ಮೂ. ಸುಬ್ರಾಯ ಕೆದಿಲಾಯ, ವೇದ ಶಿಬಿರದ ಅವಶ್ಯಕತೆಯ ಬಗ್ಗೆ ತಿಳಿಸಿ, ಮಕ್ಕಳಿಗೆ ಸಂಸ್ಕಾರ ಹಾಗೂ ಪುರಾಣ ಕತೆಗಳ ಬಗ್ಗೆ ತಿಳಿಸಬೇಕಾದ ಅವಶ್ಯಕತೆ ಇದೆ ಎಂದರು.
ಶಿಬಿರದ ಮುಖ್ಯ ಪ್ರಾಚಾರ್ಯ ವೇ.ಮೂ.ಮಹಾಬಲೇಶ್ವರ ಭಟ್ ಪ್ರಥಮ ಪಾಠವನ್ನು ಶಿಬಿರಾರ್ಥಿಗಳಿಗೆ ಭೋಧಿಸಿದರು.
ಗುತ್ತಿಗಾರು ಹವ್ಯಕ ವಲಯಾಧ್ಯಕ್ಷ ಸೀತಾರಾಮ ಭಟ್ ಸಭಾದ್ಯಕ್ಷತೆ ವಹಿಸಿದ್ದರು. ಅನೂಚಾನ ವಿದ್ಯಾ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ.ಶ್ರೀಕೃಷ್ಣ ಗುಂಡಿಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇ.ಮೂ.ಕರುವಜೆ ಕೇಶವ ಜೋಯಿಸರು ಗಾಯತ್ರೀ ಯಜ್ಞ ಸಂಕಲ್ಪ ಮತ್ತು ಘೃತ ಕಲಶ ಸ್ಥಾಪಿಸಿ ಗಾಯತ್ರೀ ಜಪಾರಂಭಿಸಿದರು.
ವಲಯ ಸಂಸ್ಕಾರ ವಿಭಾಗ ಪ್ರಮುಖ ಸುಬ್ರಹ್ಮಣ್ಯ ಭಟ್ ಜೀರ್ಮುಖಿ ಸ್ವಾಗತಿಸಿದರು. ವಲಯ ಕಾರ್ಯದರ್ಶಿ ಸೂರ್ಯನಾರಾಯಣ ಪುಚ್ಚಪ್ಪಾಡಿ ವಂದಿಸಿದರು. ವಿದ್ಯಾಪ್ರತಿಷ್ಟಾನದ ಕಾರ್ಯದರ್ಶಿ ಶಿವರಾಮ ಕರುವಜೆ ನಿರ್ವಹಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಏಪ್ರಿಲ್‌ನಲ್ಲಿ ಶನಿ ತನ್ನದೇ ನಕ್ಷತ್ರದಲ್ಲಿ (ಕನ್ಯಾ ರಾಶಿ) ಪ್ರವೇಶ | 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |
March 13, 2025
7:00 AM
by: ದ ರೂರಲ್ ಮಿರರ್.ಕಾಂ
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ
March 12, 2025
10:13 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |
March 12, 2025
10:03 PM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror