ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ಬ್ರಹ್ಮರಥೋತ್ಸವ

December 2, 2019
9:59 PM

ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.

ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.

Advertisement

ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.

ಚಿತ್ರಗಳು : ಮಂಜು ನೀರೇಶ್ವಾಲ್ಯ 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror