ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ಬ್ರಹ್ಮರಥೋತ್ಸವ

December 2, 2019
9:59 PM

ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.

ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.

ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.

ಚಿತ್ರಗಳು : ಮಂಜು ನೀರೇಶ್ವಾಲ್ಯ 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror