ಎಲಿಮಲೆ: ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಪಿ.ಯು. ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಭವಿತ್.ಜಿ.ಬಾಳುಗೋಡು ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೇಷ್ಠಾ ಸಿ.ಆರ್ ದಕ್ಷಿಣ ಕನ್ನಡ ಜಿಲ್ಲಾ ತಂಡದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿ ದಕ್ಷಿಣ ಮಧ್ಯಕ್ಷೇತ್ರಕ್ಕೆ ಆಯ್ಕೆಗೊಂಡು, ದಕ್ಷಿಣ ಮಧ್ಯಕ್ಷೇತ್ರ ಕಬ್ಬಡ್ಡಿ ಪಂದ್ಯಾಟದಲ್ಲಿಯೂ ಜಯಗಳಿಸಿ ಅಕ್ಟೋಬರ್ 24 ರಿಂದ 28 ರವರೆಗೆ ಬಿಹಾರ ರಾಜ್ಯದಲ್ಲಿ ನಡೆಯಲಿರುವ ವಿದ್ಯಾಭಾರತಿ ಅಖಿಲ ಭಾರತ ಮಟ್ಟದ ರಾಷ್ಟ್ರೀಯ ಕಬ್ಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರತಿನಿಧಿಸಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel