ವಿನೋಬಾನಗರ ವಿವೇಕಾನಂದ ಶಾಲಾ ನೂತನ ಕಟ್ಟಡದ ಭೂಮಿ ಪೂಜೆ

June 27, 2020
10:17 PM

ಸುಳ್ಯ: ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಎಂ.ಆರ್.ಪಿ.ಎಲ್. ಕೊಡುಗೆ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಶಾಲಾ ಕಟ್ಟಡದ ಭೂಮಿ ಪೂಜೆಯು ಶುಕ್ರವಾರ ಜರುಗಿತು.

ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೂಮಿಪೂಜೆ ನೆರವೇರಿಸಿದರು. ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಎಲ್ಲಾ ರೀತಿಯ ನೆರವು, ಸಹಕಾರ ನೀಡುವುದಾಗಿ ಅವರು ಹೇಳಿದರು. ವಿವೇಕಾನಂದ ವಿದ್ಯಾಸಂಸ್ಥೆಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಅಗತ್ಯವಿದೆ. ಅದಕ್ಕೆ ಪ್ರಯತ್ನ ನಡೆಸುವುದಾಗಿ ಅವರು ಹೇಳಿದರು.

ಶಾಸಕ ಎಸ್.ಅಂಗಾರ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಎಂ.ಆರ್.ಪಿ.ಎಲ್.ಜನರಲ್ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ನ.ಸೀತಾರಾಮ, ಶಾಲಾ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್, ಶಾಲಾ ಸಂಚಾಲಕ ಕೆ. ಸುಧಾಕರ ಕಾಮತ್ ವಿನೋಬಾನಗರ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror